Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 25:8 - ಕನ್ನಡ ಸಮಕಾಲಿಕ ಅನುವಾದ

8 ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 25:8
28 ತಿಳಿವುಗಳ ಹೋಲಿಕೆ  

‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.”


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


ಕೊನೆಯದಾಗಿ, ನಿರ್ಮೂಲವಾಗುವ ವೈರಿ ಮರಣವೇ.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.


ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.


ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.


ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು.


“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.


ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.


ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.


ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷ ಪಡುವೆನು. ಅದರಲ್ಲಿ ಅಳುವ ಧ್ವನಿಯೂ, ಪ್ರಲಾಪದ ಧ್ವನಿಯೂ ಇನ್ನು ಕೇಳಿಬರುವುದಿಲ್ಲ.


ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.


ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.


ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.


ಅವಳು, “ಜನರಲ್ಲಿ ನನಗಿದ್ದ ಅವಮಾನವನ್ನು ತೆಗೆದುಹಾಕುವುದಕ್ಕಾಗಿ ಕರ್ತದೇವರು ನನ್ನ ಮೇಲೆ ದಯೆತೋರಿಸಿ ಈ ದಿನಗಳಲ್ಲಿ ನನಗೆ ಹೀಗೆ ಮಾಡಿದ್ದಾರೆ,” ಎಂದು ಹೇಳಿದಳು.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.


ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.


ಏಕೆಂದರೆ ಯೆಹೋವ ದೇವರೇ, ನೀವು ನನ್ನನ್ನು ಮರಣಕ್ಕೂ, ನನ್ನ ಕಣ್ಣುಗಳನ್ನು ಕಣ್ಣೀರಿಗೂ, ನನ್ನ ಪಾದಗಳನ್ನು ಬೀಳದಂತೆಯೂ ತಪ್ಪಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು