Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:14 - ಕನ್ನಡ ಸಮಕಾಲಿಕ ಅನುವಾದ

14 ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ. ತೀರಿಹೋದ ಆ ಆತ್ಮಗಳು ಎದ್ದು ಬರುವುದಿಲ್ಲ. ನೀವು ಅವರನ್ನು ದಂಡಿಸಿ ಅಳಿಸಿಬಿಟ್ಟಿದ್ದೀರಿ. ಅವರ ನೆನಪೇ ಉಳಿಯದ ಹಾಗೆ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಆ ಒಡೆಯರ ಮೇಲೆ ಕೈಮಾಡಿ ನಿರ್ಮೂಲಪಡಿಸಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದೀ; ಸತ್ತವರು ಪುನಃ ಬದುಕುವದಿಲ್ಲ, ಪ್ರೇತಗಳು ಎದ್ದು ಬರುವದಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇತರ ದೇವರುಗಳಿಗೆ ಜೀವವಿಲ್ಲ. ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ. ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ. ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:14
25 ತಿಳಿವುಗಳ ಹೋಲಿಕೆ  

ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.


ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?


ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.


ಉಳಿದ ಸತ್ತವರು ಆ ಸಾವಿರ ವರ್ಷ ಗತಿಸುವ ತನಕ ಜೀವಿತರಾಗಲಿಲ್ಲ. ಇದೇ ಪ್ರಥಮ ಪುನರುತ್ಥಾನವು.


“ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹಿಂದಿರುಗು, ಮಗುವಿನ ಪ್ರಾಣ ತೆಗೆಯಬೇಕೆಂದಿದ್ದವರು ಸತ್ತುಹೋದರು,” ಎಂದು ಹೇಳಿದನು.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.


ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು.


ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.


ಆ ದಿನದಲ್ಲಿ ಯೆಹೋವ ದೇವರು ಈ ಪ್ರಕಾರ ಇಸ್ರಾಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಇಸ್ರಾಯೇಲರು ಸಮುದ್ರ ತೀರದಲ್ಲಿ ಸತ್ತ ಈಜಿಪ್ಟಿನವರನ್ನು ನೋಡಿದರು.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಕೇಡು ಮಾಡುವವರು ಬಿದ್ದಿದ್ದಾರೆ. ಅವರು ಏಳಲಾರದೆ ಕೆಳಗೆ ಬಿದ್ದಿದ್ದಾರೆ.


ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ.


ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಅವುಗಳ ಬಾಯಲ್ಲಿ ಶ್ವಾಸ ಇಲ್ಲ.


ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ.


ಸೇನಾಧೀಶ್ವರ ಯೆಹೋವ ದೇವರು ಗುಡುಗಿನಿಂದಲೂ, ಮಹಾಶಬ್ದದಿಂದಲೂ, ಬಿರುಗಾಳಿ ಸುಳಿಗಾಳಿಯಿಂದಲೂ, ದಹಿಸುವ ಅಗ್ನಿಜ್ವಾಲೆಯಿಂದಲೂ ಪ್ರತ್ಯಕ್ಷರಾಗುವರು.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


ಮೋಡವು ಕರಗಿ ಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.


ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು; ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು.


ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು