Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 26:15 - ಕನ್ನಡ ಸಮಕಾಲಿಕ ಅನುವಾದ

15 ಜನಾಂಗವನ್ನು ಹೆಚ್ಚಿಸಿದ್ದೀರಿ. ಯೆಹೋವ ದೇವರೇ, ಜನಾಂಗವನ್ನು ಹೆಚ್ಚಿಸಿದ್ದೀರಿ. ನೀವು ಮಹಿಮೆ ಹೊಂದಿದ್ದೀರಿ. ನೀವು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆಯವರೆಗೂ ವಿಸ್ತರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೆಚ್ಚಿಸಿರುವೆ ಸರ್ವೇಶ್ವರಾ, ನಿನ್ನ ಜನರನು ಹೌದು, ವೃದ್ಧಿಗೊಳಿಸಿರುವೆ ನಿನ್ನ ಪ್ರಜೆಯನು. ವಿಸ್ತರಿಸಿರುವೆ ನಾಡಿನ ಮೇರೆಗಳನು ಈಪರಿ ಪಡೆದಿರುವೆ ಮಹಿಮೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನೇ, ನಿನ್ನ ಜನವನ್ನು ಹೆಚ್ಚಿಸಿದ್ದಿ, ಹೌದು ನಿನ್ನ ಪ್ರಜೆಯನ್ನು ವೃದ್ಧಿಗೊಳಿಸಿದ್ದಿ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ. ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 26:15
33 ತಿಳಿವುಗಳ ಹೋಲಿಕೆ  

ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀರಿ. ಸುಗ್ಗಿ ಕಾಲದ ಸಂತೋಷದಂತೆಯೂ, ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾಸಿಸುವ ಹಾಗೆಯೂ ನಿಮ್ಮ ಮುಂದೆ ಸಂತೋಷಿಸುವರು.


ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.


ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.


“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.


ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವುವು. ಅತಿವಿಸ್ತಾರವಾದ ದೇಶವನ್ನು ಕಣ್ಣು ತುಂಬಾ ನೋಡುವಿರಿ.


ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿದಿರಿ. ಅವರು ಸ್ವಾಧೀನಮಾಡಿಕೊಳ್ಳುವರು ಎಂದು ನೀವು ಅವರ ಪಿತೃಗಳಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಬರಮಾಡಿದಿರಿ.


ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ.


ಧೂಳಿನಷ್ಟು ಅಸಂಖ್ಯವಾದ ಯಾಕೋಬರನ್ನು ಎಣಿಸುವುದಕ್ಕೂ, ಇಸ್ರಾಯೇಲಿನ ನಾಲ್ಕನೆಯ ಒಂದು ಪಾಲನ್ನು ಲೆಕ್ಕ ಮಾಡುವುದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು. ನನ್ನ ಅಂತ್ಯವು ಅವರಂತೆಯೇ ಆಗಲಿ.”


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.


ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.


ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


ದೇಶಗಳನ್ನು ಬೆಳೆಸುವುದೂ, ದಂಡಿಸುವುದೂ ದೇವರ ಕೈಯಲ್ಲಿದೆ; ದೇಶಗಳನ್ನು ವಿಸ್ತಾರಮಾಡುವುದೂ, ಚದರಿಸುವುದೂ ದೇವರ ಅಧಿಕಾರದಲ್ಲಿದೆ.


ಆಗ ಯೆಹೋವ ದೇವರ ಮಹಿಮೆಯು ಗೋಚರವಾಗುವುದು. ಮಾನವರೆಲ್ಲರೂ ಒಟ್ಟಿಗೆ ಅದನ್ನು ಕಾಣುವರು. ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು