Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:1 - ಕನ್ನಡ ಸಮಕಾಲಿಕ ಅನುವಾದ

1 ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:1
30 ತಿಳಿವುಗಳ ಹೋಲಿಕೆ  

ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.


ಏಕೆಂದರೆ ಬೆಂಕಿಯಿಂದಲೂ ತಮ್ಮ ಖಡ್ಗದಿಂದಲೂ ಯೆಹೋವ ದೇವರು ಮನುಷ್ಯರಿಗೆಲ್ಲಾ ನ್ಯಾಯತೀರಿಸುವರು. ಯೆಹೋವ ದೇವರಿಂದ ಹತರಾಗುವವರು ಅನೇಕರಾಗಿರುವರು.


ಅದರಲ್ಲಿ ಹಡಗುಗಳು ಹೋಗುತ್ತವೆ; ಅದರಲ್ಲಿ ಆಡುವುದಕ್ಕೆ ನೀವು ರೂಪಿಸಿದ ಲಿವ್ಯಾತಾನ ತಿಮಿಂಗಲವು ಇದೆ.


ದೇವರ ಶ್ವಾಸದಿಂದ ಆಕಾಶಮಂಡಲವು ಶುಭ್ರವಾಗಿದೆ; ದೇವರು ಹಸ್ತವು ಹರಿದೋಡುವ ಸರ್ಪವನ್ನು ಇರಿಯುತ್ತದೆ.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.


ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು.


“ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ಜಜ್ಜಿದ್ದಾನೆ. ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. ನಮ್ಮನ್ನು ಉಗುಳಿಬಿಟ್ಟಿದ್ದಾನೆ.


ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು; ಸೃಷ್ಟಿಕರ್ತ ದೇವರು ಅದಕ್ಕೆ ಕೋರೆಹಲ್ಲಿನ ಖಡ್ಗವನ್ನು ಒದಗಿಸಿದ್ದಾರೆ.


ಅನಂತರ ದೂತನು ನನಗೆ, “ಜಾರಸ್ತ್ರೀ ಕೂತಿದ್ದ ಕಡೆ ನೀನು ಕಂಡ ನೀರುಗಳು, ಪ್ರಜೆಗಳನ್ನೂ ಸಮೂಹಗಳನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತವೆ.


ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು.


ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.


ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದರು.


ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳವಳೇ, ನಿನ್ನ ಅಂತ್ಯವೂ, ನಿನ್ನ ನಾಶನದ ಕಾಲವು ಬಂತು.


“ಅಯ್ಯೋ, ಯೆಹೋವ ದೇವರ ಖಡ್ಗವೇ, ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ; ವಿಶ್ರಮಿಸಿಕೋ, ಸುಮ್ಮನಿರು.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ. ನಿಮ್ಮ ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಳ್ಳಿರಿ.


ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ.


“ಯೋಬನೇ, ಲಿವ್ಯಾತಾನ್ ಮೊಸಳೆಯನ್ನು ಗಾಳದಿಂದ ಎಳೆಯಬಲ್ಲೆಯಾ? ಹಗ್ಗದಿಂದ ಅದರ ನಾಲಿಗೆಯನ್ನು ಬಿಗಿಯಬಲ್ಲೆಯಾ?


ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”


ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು