Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:13 - ಕನ್ನಡ ಸಮಕಾಲಿಕ ಅನುವಾದ

13 ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಆ ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಆ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಆ ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:13
51 ತಿಳಿವುಗಳ ಹೋಲಿಕೆ  

ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.


ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.


ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.


ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”


ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು.


ಆಗ ಏಳು ತುತೂರಿಗಳನ್ನು ಹಿಡಿದಿರುವ ಏಳು ದೇವದೂತರು ಅವುಗಳನ್ನು ಊದಲು ಸಿದ್ಧರಾದರು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.


ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.


ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು.


ಏಕೆಂದರೆ ಅವರು ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಹೀಗೆ ಅವರು ಈಜಿಪ್ಟಿಗೆ ಹೋಗಿ ತಹಪನೇಸಿಗೆ ಬಂದರು.


“ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”


ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.


ಯೆಹೋವ ದೇವರು ತಮ್ಮನ್ನು ಈಜಿಪ್ಟಿನವರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವ ದೇವರನ್ನು ತಿಳಿದುಕೊಳ್ಳುವರು ಮತ್ತು ಬಲಿಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಯೆಹೋವ ದೇವರಿಗೆ ಪ್ರಮಾಣ ಮಾಡಿಕೊಂಡು ನೆರವೇರಿಸುವರು.


ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.


ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.


ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.


ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರನ್ನು ಹೊಡೆಯುವರು; ಗಾಯಮಾಡಿ ಸ್ವಸ್ಥ ಮಾಡುವರು. ಅವರು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು, ದೇವರು ಅವರನ್ನು ಆಲೈಸಿ ಸ್ವಸ್ಥ ಮಾಡುವರು.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.


ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ, ನಿಮ್ಮನ್ನು ಜನರೊಳಗಿಂದ ಹೊರತಂದು ನೀವು ಚದರಿಹೋಗಿರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸುವೆನು.


ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.


ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


‘ನಾನು ಒಪ್ಪಿಸಿಬಿಡು,’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ,’ ಎಂದು ದಕ್ಷಿಣದಿಕ್ಕಿಗೂ ಹೇಳಿ, ದೂರದಲ್ಲಿರುವ ನನ್ನ ಪುತ್ರರನ್ನೂ, ದಿಗಂತಗಳಲ್ಲಿರುವ ನನ್ನ ಪುತ್ರಿಯರನ್ನೂ,


ಒಂದು ದಿನ ಬರುವದು, ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, ‘ಏಳಿರಿ, ಚೀಯೋನಿಗೆ, ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’ ” ಎಂದು ಕೂಗುವರು.


ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು