Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:9 - ಕನ್ನಡ ಸಮಕಾಲಿಕ ಅನುವಾದ

9 ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:9
36 ತಿಳಿವುಗಳ ಹೋಲಿಕೆ  

ನಾನು ಅವರ ಪಾಪಗಳನ್ನು ತೆಗೆದುಹಾಕುವಾಗ, ಅವರೊಂದಿಗೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ ಎಂದು ತಿಳಿದುಕೊಳ್ಳುವೆನು,” ಎಂಬುದೇ.


ನಾನು ನಿನ್ನನ್ನು ಪರಿಶೋಧಿಸಿದ್ದೇನೆ. ಆದರೆ ಬೆಳ್ಳಿಯಂತೆ ಅಲ್ಲ, ಸಂಕಟದ ಕುಲುಮೆಯಿಂದ ನಿನ್ನನ್ನು ಆಯ್ದುಕೊಂಡಿದ್ದೇನೆ.


ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.


ಅವರು ತಮ್ಮ ಕೈಕೆಲಸವಾದ ಬಲಿಪೀಠಗಳನ್ನು ದೃಷ್ಟಿಸುವರು. ಬೆರಳುಗಳು ಮಾಡಿದ ಧೂಪಪೀಠಗಳನ್ನು, ಅಶೇರ ಸ್ತಂಭಗಳನ್ನು ಗೌರವಿಸುವುದಿಲ್ಲ.


ಏಕೆಂದರೆ, ಕರ್ತದೇವರು ಯಾರನ್ನು ಪ್ರೀತಿಸುತ್ತಾರೋ ಅವರನ್ನು ಶಿಕ್ಷಿಸುತ್ತಾರೆ. ತಾವು ಸ್ವೀಕರಿಸುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾರೆ!” ಎಂಬುದಾಗಿದೆ.


ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.


“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


“ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ.


ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.


“ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.


ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ.


ನಾನು ಶ್ರಮೆಪಟ್ಟದ್ದು ನನಗೆ ಒಳ್ಳೆಯದಾಯಿತು ಅದರಿಂದ ನಿಮ್ಮ ತೀರ್ಪುಗಳನ್ನು ಕಲಿತೆನು.


ನಾನು ಬಾಧೆಪಡುವುದಕ್ಕಿಂತ ಮುಂಚೆ ದಾರಿತಪ್ಪಿಹೋಗುತ್ತಿದ್ದೆನು, ಆದರೆ ಈಗ ನಿಮ್ಮ ವಾಕ್ಯವನ್ನು ಪಾಲಿಸುತ್ತಿದ್ದೇನೆ.


ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.


ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,


ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು.


ಬಾಳನ ದೇವಸ್ಥಾನದಿಂದ ವಿಗ್ರಹಗಳನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.


ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಧೂಪವೇದಿಗಳು ಚೂರುಚೂರಾಗುವುವು. ನಿಮ್ಮ ಜನರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.


ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.


ನಿನ್ನ ದೇಶದ ಪಟ್ಟಣಗಳನ್ನು ನಾಶಮಾಡಿಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು