Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:17 - ಕನ್ನಡ ಸಮಕಾಲಿಕ ಅನುವಾದ

17 ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನ್ಯಾಯವನ್ನು ನೂಲನ್ನಾಗಿಯೂ, ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು, ಜಲಪ್ರವಾಹವು ಮೋಸದ ಅಡಗು ಸ್ಥಳವನ್ನು ಮುಳುಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನ್ಯಾಯವನ್ನು ನೂಲನ್ನಾಗಿಯೂ ಧರ್ಮವನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಅಸತ್ಯದ ಆಶ್ರಯವನ್ನು ಬಡಿದುಕೊಂಡು ಹೋಗುವದು, ಜಲಪ್ರವಾಹವು [ಮೋಸದ] ಮರೆಯನ್ನು ಮುಣುಗಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಗೋಡೆಯು ನೆಟ್ಟಗಿದೆಯೆಂದು ನೋಡಲು ಜನರು ಗುಂಡನ್ನೂ ನೂಲನ್ನೂ ಉಪಯೋಗಿಸುತ್ತಾರೆ. ಅದೇ ರೀತಿಯಲ್ಲಿ ನಾನು ನ್ಯಾಯವನ್ನು ನೂಲನ್ನಾಗಿಯೂ ಕರುಣೆಯನ್ನು ಗುಂಡನ್ನಾಗಿಯೂ ಉಪಯೋಗಿಸುವೆನು. ನೀವು ದುಷ್ಟಜನರು. ನೀವು ನಿಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತಿದ್ದೀರಿ. ಆದರೆ ನೀವು ಶಿಕ್ಷಿಸಲ್ಪಡುವಿರಿ. ನೀವು ಅಡಗಿಕೊಂಡಿರುವ ಸ್ಥಳವನ್ನು ನಾಶಮಾಡುವ ಬಿರುಗಾಳಿಯಂತೆಯೂ ಪ್ರವಾಹದಂತೆಯೂ ಅದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:17
35 ತಿಳಿವುಗಳ ಹೋಲಿಕೆ  

ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ವಿರುದ್ಧ ಬಳಸಿದ ನೂಲನ್ನೂ, ಅಹಾಬನ ಮನೆಯ ವಿರುದ್ಧ ಬಳಸಿದ ಮಟ್ಟಗೋಲನ್ನೂ ಚಾಚಿ, ಒಬ್ಬನು ತಟ್ಟೆಯನ್ನು ಒರೆಸಿದಂತೆ ಅದನ್ನು ಒರೆಸಿ ತಲೆಕೆಳಗಾಗಿ ಹಾಕುವ ಹಾಗೆ ನಾನು ಯೆರೂಸಲೇಮನ್ನು ಅಳಿಸಿಬಿಡುವೆನು.


ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಆದರೆ ಅಂಥಾ ಅಪರಾಧಗಳನ್ನು ಮಾಡುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.


ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು.


ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು.


ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.


ಏಕೆಂದರೆ ಕರ್ತನು ತಮ್ಮ ವಾಕ್ಯವನ್ನು ಭೂಮಿಯ ಮೇಲೆ ಅಂತಿಮವಾಗಿಯೂ ತ್ವರಿತವಾಗಿಯೂ ನೆರವೇರಿಸುವರು.”


ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.


ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.


ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.


ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.


ಆತನ ಶ್ವಾಸವು ತುಂಬುತ್ತಾ, ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.


ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.


ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು.


ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.


“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.


ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು