Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:22 - ಕನ್ನಡ ಸಮಕಾಲಿಕ ಅನುವಾದ

22 ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದಕಾರಣ ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವದನ್ನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಗ ನೀವು ಆ ವಿಷಯಗಳೊಂದಿಗೆ ಯುದ್ಧ ಮಾಡಬಾರದು. ನೀವು ಹಾಗೆ ಮಾಡಿದ್ದಲ್ಲಿ ನಿಮ್ಮ ಸುತ್ತಲಿರುವ ಹಗ್ಗವು ಇನ್ನೂ ಬಿಗಿಯಾಗುವದು. ನಾನು ಕೇಳಿರುವ ಮಾತುಗಳು ಬದಲಾಗವು. ಯಾಕೆಂದರೆ ಅವು ಸರ್ವಶಕ್ತನಾದ ಯೆಹೋವನ ಮಾತುಗಳು. ಆತನು ಪ್ರಪಂಚವನ್ನು ಆಳುವಾತನು. ಆ ಸಂಗತಿಗಳೆಲ್ಲವೂ ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:22
28 ತಿಳಿವುಗಳ ಹೋಲಿಕೆ  

ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ಯೇಸುವಿನ ಜೊತೆಗೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಸಹ ಅದೇ ರೀತಿಯಾಗಿ ಅವರನ್ನು ನಿಂದಿಸಿದರು.


ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ,


ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.


ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.


ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ.


ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸ ಪಡಲೂ ಇಲ್ಲ; ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ;


ದೇವರು ಕಂಚಿನ ಕದಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದುಬಿಟ್ಟಿದ್ದಾರೆ.


ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.


ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.


ಯೆಹೋವ ದೇವರಿಗೆ ವಿರೋಧವಾಗಿ ಅವರು ಏನೇನು ಯೋಚಿಸಿರುವರೋ, ಅದನ್ನು ಅವರು ಅಂತ್ಯಗೊಳಿಸುವರು. ತೊಂದರೆಯು ಎರಡು ಸಾರಿ ಏಳದು.


ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ,” ಎಂದನು.


ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.


ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.


ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವುದೋ? ನಿನ್ನ ಕೈಗಳು ಬಲವಾಗಿರುವುವೋ? ಯೆಹೋವ ದೇವರಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು