Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 28:27 - ಕನ್ನಡ ಸಮಕಾಲಿಕ ಅನುವಾದ

27 ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. ಅಗಸೆಯು ಕೋಲಿನಿಂದಲೂ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದುದರಿಂದ ಅವನು ಜೀರಿಗೆಯನ್ನು ಒಕ್ಕುವುದು ಯಂತ್ರದಿಂದಲ್ಲ ಅಥವಾ ಗಾಡಿಯ ಚಕ್ರದಿಂದಲ್ಲ ಆದರೆ ಕೋಲಿನಿಂದಲೇ; ಅಗಸೆಯನ್ನು ಒಕ್ಕುವುದು ಕೋಲಿನಿಂದಲೇ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದಲೇ, ಕಣದ ಗುಂಡಿನಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸದಾಪನ್ನು ಒಕ್ಕುವುದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದಕಾರಣ ಅವನು ಕರಿಯ ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ; ಜೀರಿಗೆಯನ್ನು ಒಕ್ಕುವದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ವ್ಯವಸಾಯಗಾರನು ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ. ಜೀರಿಗೆಯನ್ನು ಕುದುರೆಯಿಂದ ಗುಂಡನ್ನು ಉರುಳಿಸಿ ನುಚ್ಚುನೂರು ಮಾಡುವನೋ? ಇಲ್ಲ! ಅವನೊಂದು ಸಣ್ಣ ಕೋಲನ್ನು ಉಪಯೋಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 28:27
10 ತಿಳಿವುಗಳ ಹೋಲಿಕೆ  

ಇಗೋ, ನಿನ್ನನ್ನು ಹದವಾದ, ಹೊಸ ಮೊನೆಹಲ್ಲಿನ ಹಂತೀಕುಂಟೆಯನ್ನಾಗಿ ಮಾಡುವೆನು. ನೀನು ಬೆಟ್ಟಗಳನ್ನು ಹೊಕ್ಕು, ಪುಡಿಪುಡಿಮಾಡಿ, ಗುಡ್ಡಗಳನ್ನು ಹೊಟ್ಟಿನಂತೆ ಮಾಡುವೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”


ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.


ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು.


ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು.


ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.


ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು; ಯಾವಾಗಲೂ ಅದನ್ನು ಒಕ್ಕುತ್ತಿರುವುದಿಲ್ಲ. ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವುದಿಲ್ಲ ಅವನ ಕುದುರೆ ಸವಾರದಿಂದ ಒಕ್ಕುತ್ತಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು