Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:13 - ಕನ್ನಡ ಸಮಕಾಲಿಕ ಅನುವಾದ

13 ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:13
25 ತಿಳಿವುಗಳ ಹೋಲಿಕೆ  

ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, ನೀವು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.


ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ. ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು.


ಈ ಶಾಸನಗಳು ಮಾನವ ಆಜ್ಞೆಗಳ ಹಾಗೂ ಬೋಧನೆಗಳ ಅನುಸಾರವಾಗಿ ಬಳಕೆಯಿಂದ ಅಳಿದುಹೋಗುತ್ತವೆ!


ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”


ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ.


ಯೆಹೋವ ದೇವರೇ, ನನ್ನ ಬೇಡಿಕೆ ನ್ಯಾಯವಾದದ್ದು, ನನ್ನ ಮೊರೆಗೆ ಕಿವಿಗೊಡಿರಿ. ನನ್ನ ಪ್ರಾರ್ಥನೆಯನ್ನು ಕೇಳಿರಿ, ಅದು ಕಪಟ ತುಟಿಗಳಿಂದ ಬಂದದ್ದಲ್ಲ.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು.


ಆದರೆ ದುಷ್ಟನಿಗೆ ದೇವರು ಹೇಳುವುದೇನೆಂದರೆ: “ನನ್ನ ನಿಯಮಗಳನ್ನು ಪಠಿಸುವುದಕ್ಕೆ ಹಕ್ಕು ನಿಮಗೆ ಏನಿದೆ? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಛರಿಸುವುದೇಕೆ?


ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ವಾಸಿಸಿದ ಪಟ್ಟಣವೇ! ವರುಷಕ್ಕೆ ವರುಷವನ್ನು ಕೂಡಿಸಿರಿ. ನಿಮ್ಮ ಹಬ್ಬಗಳ ಚಕ್ರ ಮುಂದುವರಿಯಲಿ.


ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು ನನಗೆ ಓದಲು ಬರುವುದಿಲ್ಲ ಅನ್ನುವನು.


ಆದ್ದರಿಂದ ಆತನು ತನ್ನ ಯುದ್ಧದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ, ಅವನಿಗೆ ತಿಳಿಯಲಿಲ್ಲ. ಅದು ಅವನನ್ನು ಸುಟ್ಟರೂ, ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.


ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.


ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.


“ಮನುಷ್ಯಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿಜ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಯೆಹೋವ ದೇವರ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.


“ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗದಿಂದ ತೊಲಗಿರಿ. ಇಸ್ರಾಯೇಲರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ,” ಎಂದು ಹೇಳುತ್ತಾರೆ.


ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು