Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:17 - ಕನ್ನಡ ಸಮಕಾಲಿಕ ಅನುವಾದ

17 ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು, ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇನ್ನು ಸ್ವಲ್ಪ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು, ಈಗಿನ ತೋಟವು ಅರಣ್ಯವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕೊಂಚ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅತ್ಯಲ್ಪಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದು ಸತ್ಯ: ಸ್ವಲ್ಪ ಸಮಯದ ನಂತರ, ಕರ್ಮೆಲ್ ಬೆಟ್ಟದಂತೆ ಲೆಬನೋನ್ ಫಲವತ್ತಾಗುವದು. ಕರ್ಮೆಲ್ ಬೆಟ್ಟವು ದಟ್ಟ ಅಡವಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:17
24 ತಿಳಿವುಗಳ ಹೋಲಿಕೆ  

ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.


ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.


ಏಕೆಂದರೆ, “ಇನ್ನು ಸ್ವಲ್ಪ ಸಮಯದಲ್ಲಿಯೇ, ಬರಲಿರುವ ಒಬ್ಬರು ಬಂದೇ ಬರುವರು. ಅವರು ತಡಮಾಡುವುದಿಲ್ಲ.”


“ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸ್ವಲ್ಪ ಕಾಲದ ನಂತರ ಇನ್ನೊಂದು ಸಾರಿ ನಾನು ಆಕಾಶಗಳನ್ನು ಭೂಮಿಯನ್ನು, ಸಮುದ್ರವನ್ನು ಮತ್ತು ಒಣನೆಲವನ್ನು ಕದಲಿಸುತ್ತೇನೆ.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ಸ್ವಲ್ಪಕಾಲ ಮಾತ್ರ ನಿಮ್ಮ ಪರಿಶುದ್ಧ ಜನರು ಅದನ್ನು ಸ್ವಾಧೀನಮಾಡಿಕೊಂಡರು. ನಮ್ಮ ಶತ್ರುಗಳು ನಿಮ್ಮ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.


ಮುಳ್ಳಿಗೆ ಬದಲಾಗಿ ತುರಾಯಿ ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವುವು. ಇದು ಯೆಹೋವ ದೇವರ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.


ಮರುಭೂಮಿಯಲ್ಲಿ ದೇವದಾರು, ಜಾಲೀಮರ, ಸುಗಂಧ, ಓಲಿವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ದೇವರು ಮರುಭೂಮಿಯನ್ನು ನೀರಿನ ಕೆರೆಯಾಗಿಯೂ, ಒಣ ಭೂಮಿಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸಿದರು.


ದೇವರು ನದಿಗಳನ್ನು ಮರುಭೂಮಿಯಾಗಿ ಮಾರ್ಪಡಿಸಿದರು, ನೀರಿನ ಬುಗ್ಗೆಗಳನ್ನು ದಾಹಗೊಂಡ ಭೂಮಿಯಂತೆ ಮಾಡಿದರು.


ಬಾಕಾ ತಗ್ಗನ್ನು ದಾಟುವಾಗ ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ. ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.


“ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು