Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:20 - ಕನ್ನಡ ಸಮಕಾಲಿಕ ಅನುವಾದ

20 ಭಯಂಕರನು ಇಲ್ಲವಾಗುತ್ತಾನೆ. ಅಪಹಾಸ್ಯ ಮಾಡುವವರು ಕಣ್ಮರೆಯಾಗುತ್ತಾರೆ. ಕೇಡಿಗೆ ಕಾಯುವವರೆಲ್ಲರೂ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಏಕಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದು ಕ್ರೂರಿಗಳೂ ದುಷ್ಟರೂ ನಾಶವಾದಾಗ ಆಗುವದು. ಕೆಟ್ಟಕಾರ್ಯಗಳನ್ನು ಮಾಡುವದರಲ್ಲಿ ಸಂತೋಷಿಸುವವರು ಇಲ್ಲದೆ ಹೋದಾಗ ಆ ಕಾರ್ಯಗಳು ನಡಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:20
24 ತಿಳಿವುಗಳ ಹೋಲಿಕೆ  

ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.


ಆಗ ಹಣದಾಶೆಯಿಂದ ಕೂಡಿದ ಫರಿಸಾಯರು, ಇವುಗಳನ್ನು ಕೇಳಿ ಯೇಸುವನ್ನು ಪರಿಹಾಸ್ಯ ಮಾಡಿದರು.


ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.


ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.


ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ, ನನ್ನ ಜಯದಲ್ಲಿ ಉಲ್ಲಾಸಿಸುವವರನ್ನೂ, ನನ್ನ ಶೂರರನ್ನೂ ಸಹ ನನ್ನ ಕೋಪವನ್ನು ತೆಗೆದುಕೊಂಡು ಹೋಗಲು ಕರೆದಿದ್ದೇನೆ.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ಜನರು ನೋಡುತ್ತಾ ನಿಂತುಕೊಂಡಿದ್ದರು. ಅವರೊಂದಿಗೆ ಅಧಿಕಾರಿಗಳು ಸಹ ಯೇಸುವನ್ನು ಅಪಹಾಸ್ಯಮಾಡಿ, “ಬೇರೆಯವರನ್ನು ರಕ್ಷಿಸಿದ ಈತನು ದೇವರು ಆರಿಸಿಕೊಂಡ ಕ್ರಿಸ್ತನಾಗಿದ್ದರೆ, ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.


ಆಗ ಹೆರೋದನು ತನ್ನ ಸೈನಿಕರೊಂದಿಗೆ ಯೇಸುವನ್ನು ತಿರಸ್ಕರಿಸಿ, ಹಾಸ್ಯಮಾಡಿ, ಅವರ ಮೇಲೆ ರಾಜವಸ್ತ್ರವನ್ನು ಹೊದಿಸಿ ಅವರನ್ನು ತಿರುಗಿ ಪಿಲಾತನ ಬಳಿಗೆ ಕಳುಹಿಸಿದನು.


ಆಗ ಫರಿಸಾಯರೂ ನಿಯಮ ಬೋಧಕರೂ ಯೇಸುವಿಗೆ ವಿರೋಧವಾಗಿ ತಪ್ಪು ಕಂಡು ಹಿಡಿಯಬೇಕೆಂದು, ಅವರು ಆ ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಗಮನಿಸಿ ನೋಡುತ್ತಿದ್ದರು.


“ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು.


ಆಕಾಶವನ್ನು ಹಾಸಿ, ಭೂಮಿಯ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟುಮಾಡಿದ ಯೆಹೋವ ದೇವರನ್ನು ನೀನು ಮರೆತುಬಿಟ್ಟು, ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶಪಡಿಸುವನೋ ಎಂಬಂತೆ ಅಂಜಿಕೊಂಡಿದ್ದೀಯಲ್ಲಾ, ಆ ಹಿಂಸಕನ ಕೋಪವು ಎಲ್ಲಿ?


ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.


ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.


ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ.


ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, “ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. ಅಹಂಕಾರವಾಗಿ ನಡೆಯದೆ ಇರುವಿರಿ. ಇದು ವಿಪತ್ತಿನ ಕಾಲವೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು