Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:21 - ಕನ್ನಡ ಸಮಕಾಲಿಕ ಅನುವಾದ

21 ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಪಸಾಕ್ಷಿಯಿಂದ ತಪ್ಪು ಹೊರಿಸುವವರೂ ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ ನ್ಯಾಯವಂತನ ನ್ಯಾಯವನ್ನು ಸುಮ್ಮಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲಾ ನಿರ್ಮೂಲರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 (ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:21
22 ತಿಳಿವುಗಳ ಹೋಲಿಕೆ  

ನಿಮ್ಮನ್ನು ವಿರೋಧ ಮಾಡದ ನಿರ್ದೋಷಿಗೆ ದಂಡನೆಯನ್ನು ವಿಧಿಸಿ, ಕೊಂದುಹಾಕಿದ್ದೀರಿ.


ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.


“ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.


ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.


ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು.


ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು.


ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ!


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಬೇಟೆಯಾಗುತ್ತಾನೆ. ಯೆಹೋವ ದೇವರು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು.


ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.


ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!


ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು