Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:22 - ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಅಬ್ರಹಾಮನನ್ನು ವಿಮೋಚಿಸಿದ ಯೆಹೋವ ದೇವರು ಯಾಕೋಬಿನ ಮನೆತನದ ವಿಷಯವಾಗಿ ಹೇಳುವುದೇನೆಂದರೆ, “ಈಗ ಯಾಕೋಬ್ಯರು ನಾಚಿಕೆಪಡುವುದಿಲ್ಲ. ಅವನ ಮುಖವು ಕಳೆಗುಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರ ಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ : “ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ - ಯಾಕೋಬ್ಯರು ಇನ್ನು ನಾಚಿಕೆಗೆ ಈಡಾಗರು, ಅವರ ಮುಖವು ಇನ್ನು ಬಾಡದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ಯಾಕೋಬನ ವಂಶಕ್ಕೆ ಹೀಗೆನ್ನುತ್ತಾನೆ: “ಅಬ್ರಹಾಮನನ್ನು ಬಿಡಿಸಿದ ಯೆಹೋವನೇ ನಾನು. ಈಗ ಯಾಕೋಬಿನ ಜನರು ನಾಚಿಕೆಪಡುವದಿಲ್ಲ ಮತ್ತು ಅವಮಾನ ಹೊಂದುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:22
29 ತಿಳಿವುಗಳ ಹೋಲಿಕೆ  

“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.


“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.


“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.


ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ”


“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.


ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ


ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.


ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು. ಆದಕಾರಣ ನಾನು ಅವಮಾನ ಪಡುವುದಿಲ್ಲ. ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ. ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು