Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:10 - ಕನ್ನಡ ಸಮಕಾಲಿಕ ಅನುವಾದ

10 ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಳ್ಳೆಯವರಿಗೆ ಒಳ್ಳೆಯವುಗಳೇ ಸಂಭವಿಸುತ್ತವೆ ಎಂಬುದಾಗಿ ತಿಳಿಸು. ಅವರು ಮಾಡುವ ಒಳ್ಳೆಯ ಕಾರ್ಯಗಳಿಗಾಗಿ ಅವರಿಗೆ ಬಹುಮಾನ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:10
28 ತಿಳಿವುಗಳ ಹೋಲಿಕೆ  

ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.


ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.


ಇದಕ್ಕೆ ಯೆಹೋವ ದೇವರು, ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.


“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ಆದ್ದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದರು. ಇದಲ್ಲದೆ ಇಸ್ರಾಯೇಲರು ಸಂಖ್ಯೆಯಲ್ಲೂ ಹೆಚ್ಚಾಗಿ ಬಹು ಬಲಗೊಂಡರು.


ನೀವು ರಕ್ತವನ್ನು ಭುಜಿಸದಿದ್ದರೆ, ಯೆಹೋವ ದೇವರಿಗೆ ಮೆಚ್ಚುಗೆಯಾಗುವುದು. ಅಲ್ಲದೆ ನಿಮಗೂ, ನಿಮ್ಮ ಮಕ್ಕಳಿಗೂ ಒಳ್ಳೆಯದಾಗುವುದು.


ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.”


ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದರಿಂದ ತೃಪ್ತನಾಗುವನು, ಮನುಷ್ಯನ ಕೈಕೆಲಸಗಳು ಅವನಿಗೆ ಪ್ರತಿಫಲವನ್ನು ಕೊಡುವುವು.


ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.


ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ”


“ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?


ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.


ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.


ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ.


“ಅದಕ್ಕೆ ಅವನು, ‘ನೀನು ಐದು ಪಟ್ಟಣಗಳ ಮೇಲೆ ಅಧಿಕಾರಿಯಾಗಿರು,’ ಎಂದು ಅವನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು