Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:25 - ಕನ್ನಡ ಸಮಕಾಲಿಕ ಅನುವಾದ

25 ನಿನ್ನ ಗಂಡಸರು ಖಡ್ಗಕ್ಕೆ ತುತ್ತಾಗುವರು. ನಿನ್ನ ಶೂರರು ಯುದ್ಧದಲ್ಲಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಎಲೌ, ಸಿಯೋನ್ ನಗರಿಯೇ, ನಿನ್ನ ವೀರರು ಖಡ್ಗಕ್ಕೆ ತುತ್ತಾಗುವರು; ನಿನ್ನ ಯೋಧರು ಯುದ್ಧದಲ್ಲಿ ಮಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 [ಚೀಯೋನ್ ನಗರಿಯೇ,] ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು, ನಿನ್ನ ಶೌರ್ಯವು ಯುದ್ಧದಲ್ಲಿ ಅಡಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಸಮಯದಲ್ಲಿ ನಿಮ್ಮ ಗಂಡಸರೆಲ್ಲಾ ಖಡ್ಗದಿಂದ ಹತರಾಗುವರು. ನಿಮ್ಮ ವೀರರೆಲ್ಲರೂ ಯುದ್ಧದಲ್ಲಿ ಮಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:25
12 ತಿಳಿವುಗಳ ಹೋಲಿಕೆ  

ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು.


ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.


ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.


ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಇದಕ್ಕೋಸ್ಕರ ನಮ್ಮ ಪಿತೃಗಳು ಖಡ್ಗದಿಂದ ಬಿದ್ದಿದ್ದಾರೆ. ನಮ್ಮ ಪುತ್ರ ಪುತ್ರಿಯರೂ, ನಮ್ಮ ಹೆಂಡತಿಯರೂ ಸೆರೆಯಲ್ಲಿದ್ದಾರೆ.


ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಕಿಗಿಂತ ಹೆಚ್ಚಾಗಿರುವರು, ಯುವಕರ ತಾಯಿಗಳ ಮೇಲೆ ನಾಶ ಮಾಡುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು, ಅವರ ಮೇಲೆ ಕಳವಳವನ್ನೂ, ದಿಗಿಲನ್ನೂ ತಟ್ಟನೆ ಬೀಳಿಸುವೆನು.


ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು