Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:17 - ಕನ್ನಡ ಸಮಕಾಲಿಕ ಅನುವಾದ

17 ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು, ಐವರು ಹೆದರಿಸುವುದರಿಂದ ನೀವೆಲ್ಲರೂ ಓಡಿಹೋಗುವಿರಿ, ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು; ಐವರು ಬೆದರಿಸುವದರಿಂದ ನೀವು ಓಡಿ ಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಗಣ ಕಂಬದಂತೆಯೂ [ಒಂಟಿಯಾಗಿ] ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:17
20 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ನಿಮ್ಮಲ್ಲಿಯ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿಯ ನೂರು ಮಂದಿ, ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.


ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,


ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು.


ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರವಾಗಿದ್ದಾರೆ. ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ, ಅರಣ್ಯದಲ್ಲಿ ಹೊಂಚು ಹಾಕಿದರು.


ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು