Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:2 - ಕನ್ನಡ ಸಮಕಾಲಿಕ ಅನುವಾದ

2 ಫರೋಹನಲ್ಲಿ ತಾವು ಬಲಗೊಳ್ಳುವ ಆಶ್ರಯವನ್ನು ಈಜಿಪ್ಟಿನ ನೆರಳಿನಲ್ಲಿ ಭರವಸವಿಡಬೇಕೆಂದು ನನ್ನ ಮಾತನ್ನು ಕೇಳದೆ, ಈಜಿಪ್ಟಿಗೆ ಪ್ರಯಾಣವಾಗಿ ಹೊರಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಫರೋಹನ ಆಶ್ರಯವನ್ನು ಪಡೆದು ಐಗುಪ್ತವನ್ನು ಮರೆಹೊಗಬೇಕೆಂದು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಮಕ್ಕಳು ಈಜಿಪ್ಟಿಗೆ ಸಹಾಯಕ್ಕಾಗಿ ಹೋಗುತ್ತಾರೆ, ಆದರೆ ಅವರು ಹಾಗೆ ಮಾಡುವದು ಸರಿಯೋ ಎಂದು ನನ್ನ ಹತ್ತಿರ ಕೇಳುವದಿಲ್ಲ. ಫರೋಹನು ತಮ್ಮನ್ನು ರಕ್ಷಿಸುತ್ತಾನೆಂದು ಅವರು ತಿಳಿದಿದ್ದಾರೆ. ಈಜಿಪ್ಟೇ ತಮ್ಮನ್ನು ಕಾಪಾಡಬೇಕು ಎಂಬುದು ಅವರ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:2
26 ತಿಳಿವುಗಳ ಹೋಲಿಕೆ  

ಇಗೋ! ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು. ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.


ಏಕೆಂದರೆ ಅವರು ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಹೀಗೆ ಅವರು ಈಜಿಪ್ಟಿಗೆ ಹೋಗಿ ತಹಪನೇಸಿಗೆ ಬಂದರು.


ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.


ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.


ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ.


ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,


ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ, ಯೆರೂಸಲೇಮನ್ನು ಬಿಟ್ಟುಹೋದರು.


“ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು.


ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?


ಕೂಷ್ ನದಿಯ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡಿಗೆ ಕಷ್ಟ!


ಆಲೋಚಿಸಿ, ತೀರ್ಮಾನಿಸಿರಿ. ಮಟ್ಟ ಮಧ್ಯಾಹ್ನದಲ್ಲಿ ನಿಮ್ಮ ನೆರಳನ್ನು ರಾತ್ರಿಯಂತೆ ಮಾಡಿರಿ. ವಲಸಿಗರನ್ನು ಅಡಗಿಸಿರಿ. ಅಲೆಯುವವರನ್ನು ಬಯಲಿಗೆ ತರಬೇಡ.


ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.


ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.


“ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.


ಆಗ ಇಸ್ರಾಯೇಲರು ಅವರ ಆಹಾರದಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಅವರು ಯೆಹೋವ ದೇವರಿಂದ ಆಲೋಚನೆಯನ್ನು ಕೇಳಲಿಲ್ಲ.


ಇದಲ್ಲದೆ, ಯೆಹೋವ ದೇವರು, ನೀವು ಇನ್ನು ಮೇಲೆ ನೋಡುವುದಿಲ್ಲ ಎಂದು ಹೇಳಿದ ದಾರಿಯಲ್ಲಿಯೇ ಹಡಗುಗಳಲ್ಲಿ ಜನರು ನಿಮ್ಮನ್ನು ಈಜಿಪ್ಟಿಗೆ ತಿರುಗಿ ಬರಮಾಡುವರು. ನಿಮ್ಮನ್ನು ಅಲ್ಲಿ ದಾಸರಾಗಿಯೂ ದಾಸಿಯರಾಗಿಯೂ ನಿಮ್ಮ ಶತ್ರುಗಳಿಗೆ ಮಾರಿಕೊಳ್ಳಬೇಕೆಂದಿದ್ದರೂ, ಕೊಂಡುಕೊಳ್ಳುವವರು ಇರುವುದಿಲ್ಲ.


ಇಗೋ, ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು! ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.


ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?


ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?


ನೀವು, ‘ಇಲ್ಲ, ನಾವು ಈಜಿಪ್ಟ್ ದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧವನ್ನು ನೋಡುವುದಿಲ್ಲ, ತುತೂರಿಯ ಶಬ್ದವನ್ನು ಕೇಳುವುದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವುದಿಲ್ಲ.’ ಅಲ್ಲಿ ವಾಸಮಾಡುವೆವೆಂದು ಹೇಳಿದರೆ,


ಅವರಿಗೆ ಕಷ್ಟ, ಏಕೆಂದರೆ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರು ನಾಶವಾಗಲಿ! ಏಕೆಂದರೆ ಅವರು ನನಗೆ ವಿರುದ್ಧವಾಗಿ ದ್ರೋಹ ಮಾಡಿದ್ದಾರೆ. ನಾನು ಅವರಿಗೆ ವಿಮೋಚನೆ ಮಾಡಿದ್ದರೂ, ಅವರು ನನಗೆ ವಿರುದ್ಧವಾಗಿ ಸುಳ್ಳು ಹೇಳಿದ್ದಾರೆ.


ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ.


ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು