Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:32 - ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರು ಅದರ ಮೇಲೆ ತರುವಂಥ ನೇಮಿಸಿದ ದಂಡವು ಹಾದು ಹೋಗುವಲ್ಲೆಲ್ಲಾ ಅದು ದಮ್ಮಡಿ, ಕಿನ್ನರಿಗಳ ಸಂಗಡ ಇರುವುದು. ಆತನು ಅವರೊಂದಿಗೆ ಯುದ್ಧಗಳಲ್ಲಿ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸರ್ವೇಶ್ವರ ಸ್ವಾಮಿ ವಿಧಿಸುವ ಪ್ರತಿಯೊಂದು ಪೆಟ್ಟು ತಾಳ ತಮ್ಮಟೆಯಂತೆ ಅವರ ಮೇಲೆ ಬೀಳುವುದು. ಸರ್ವೇಶ್ವರ ತಾವೇ ಅವರ ವಿರುದ್ಧವಾಗಿ ಕೈಬೀಸಿ ಯುದ್ಧಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟೂ ದಮ್ಮಡಿ ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವದು. ಆತನು ಅವರೊಂದಿಗೆ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅಶ್ಶೂರವನ್ನು ಆತನು ಹೊಡೆಯುವಾಗ ಹಾರ್ಪ್‌ವಾದ್ಯಗಳನ್ನು ಮತ್ತು ದಮ್ಮಡಿಗಳನ್ನು ಬಾರಿಸಿದಂತಾಗುವದು. ಯೆಹೋವನು ಅಶ್ಶೂರವನ್ನು ತನ್ನ ಮಹಾಶಕ್ತಿಯಿಂದ ಸೋಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:32
20 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ತೆಗೆದುಹಾಕುವರು, ಅವರು ತಮ್ಮ ಉಷ್ಣಗಾಳಿಯಿಂದ ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, ಅದನ್ನು ಏಳು ಹೊಳೆಗಳಾಗಿ ಒಡೆದು, ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು.


ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.


ಆ ಕಾಲದಲ್ಲಿ ದೇವರ ಧ್ವನಿಯು ಭೂಮಿಯನ್ನು ಕದಲಿಸಿತು. ಈಗಲಾದರೋ, “ಇನ್ನೊಂದು ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ!” ಎಂದು ದೇವರು ವಾಗ್ದಾನಮಾಡಿದ್ದಾರೆ.


ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ಭಯಭೀತಿಗೊಳ್ಳುವಂತೆ ಮಾಡುವೆನು, ನಾನು ಅವರ ಮುಂದೆ ನನ್ನ ಖಡ್ಗವನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.


ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ ನಿಮಗೆ ಹಾಡು ಇರುವುದು. ಯೆಹೋವ ದೇವರ ಪರ್ವತವಾಗಿರುವ ಇಸ್ರಾಯೇಲಿನ ಬಂಡೆಯ ಬಳಿಗೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವುದು.


ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.


ನಾನು ನೆಮ್ಮದಿಯಿಂದ ಇದ್ದಾಗ ದೇವರು ನನ್ನನ್ನು ಚದರಿಸಿದ್ದಾರೆ; ನಾನು ಮಡಕೆ ಒಡೆದುಬಿದ್ದಂತೆ ಇದ್ದೇನೆ. ನನ್ನನ್ನು ತಮಗೆ ಗುರಿ ಹಲಗೆಯಾಗಿ ನಿಲ್ಲಿಸಿಕೊಂಡಿದ್ದಾರೆ.


“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಹೋದೆ? ಏಕೆ ಮೋಸಮಾಡಿದೆ? ನನಗೆ ತಿಳಿಸಿದ್ದರೆ ಸಂತೋಷದಿಂದ ಹಾಡು, ತಾಳ, ವೀಣೆಗಳ ಸಂಗೀತದೊಂದಿಗೆ ನಿನ್ನನ್ನು ಕಳುಹಿಸುತ್ತಿದ್ದೆನು.


ದಾವೀದನು ಫಿಲಿಷ್ಟಿಯರನ್ನು ಹೊಡೆದು ಜನರಸಹಿತವಾಗಿ ಬರುವಾಗ, ಇಸ್ರಾಯೇಲರ ಸಮಸ್ತ ಪಟ್ಟಣಗಳಿಂದ ಸ್ತ್ರೀಯರು ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಸಂತೋಷದಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ.


ಇಗೋ, ಯೆಹೋವ ದೇವರು ಭೂಮಿಯನ್ನು ಬರಿದುಮಾಡಿ, ನಿರ್ಜನ ಪ್ರದೇಶವನ್ನಾಗಿ ಮಾಡಿ, ತಲೆಕೆಳಗಾಗಿ ತಿರುಗಿಸಿ, ಅದರ ನಿವಾಸಿಗಳನ್ನು ಚದರಿಸಿಬಿಡುವವರಾಗಿದ್ದಾರೆ.


ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.


ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.


ಸೇನಾಧೀಶ್ವರ ಯೆಹೋವ ದೇವರು ಓರೇಬ್ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ, ಅವರು ಕೋಲನ್ನು ಸಮುದ್ರದ ಮೇಲೆ ಚಾಚಿ, ಈಜಿಪ್ಟಿನವರ ಮೇಲೆ ಎತ್ತಿದಂತೆ ಎತ್ತುವರು.


ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು