Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:6 - ಕನ್ನಡ ಸಮಕಾಲಿಕ ಅನುವಾದ

6 ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. [ರಾಯಭಾರಿಗಳು] ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು ಮೃಗೇಂದ್ರ, ಸಿಂಹ, ವಿಷಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ ಶ್ರಮಸಂಕಟಗಳನ್ನು ಉಂಟುಮಾಡುವದಾಗಿಯೂ ಇರುವ ದೇಶದ ಮಾರ್ಗವಾಗಿ ನಿಷ್ಪ್ರಯೋಜನವಾದ ಜನಾಂಗದ ಬಳಿಗೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೆಗೆವ್‌ನಲ್ಲಿರುವ ಪ್ರಾಣಿಗಳ ದುಃಖಕರವಾದ ಸಂದೇಶ: ನೆಗೆವ್ ಬಹು ಅಪಾಯಕಾರಿ ಸ್ಥಳ. ಸಿಂಹ, ವಿಷದ ಹಾವುಗಳು, ವೇಗವಾಗಿ ಚಲಿಸುವ ಹಾವುಗಳಿಂದ ಅದು ತುಂಬಿದೆ. ಆದರೆ ಕೆಲವರು ನೆಗೆವ್ ಮೂಲಕ ಪ್ರಯಾಣ ಮಾಡಿ ಈಜಿಪ್ಟಿಗೆ ಹೋಗುತ್ತಾರೆ. ಅವರು ತಮ್ಮ ಸಂಪತ್ತನ್ನೆಲ್ಲಾ ಕತ್ತೆಯ ಮೇಲೆ ಹೊರಿಸಿರುತ್ತಾರೆ. ಅವರು ತಮ್ಮ ಧನವನ್ನು ಒಂಟೆಯ ಮೇಲೆ ಹೊರಿಸಿರುತ್ತಾರೆ. ತಮಗೆ ಸಹಾಯ ಮಾಡಲಾರದ ದೇಶದ ಮೇಲೆ ಜನರು ಭರವಸವಿಟ್ಟಿದ್ದಾರೆ ಎಂಬುದೇ ಇದರರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:6
31 ತಿಳಿವುಗಳ ಹೋಲಿಕೆ  

ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.


ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.


ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.


ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು.


ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.


ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.


ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ. ದೂರಕ್ಕೆ ನಿನ್ನ ರಾಯಭಾರಿಗಳನ್ನು ಕಳುಹಿಸಿದ್ದೀ. ಪಾತಾಳದಷ್ಟು ನೀಚಸ್ಥಿತಿಗೆ ಇಳಿದಿದ್ದೀಯೆ.


ಈಜಿಪ್ಟಿನವರನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನಾಳುವನು, ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.


ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.


ಆಗ ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಬೆಳ್ಳಿಬಂಗಾರವನ್ನು ತೆಗೆದು, ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ ಅವನಿಗೆ,


ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ, ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.


ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.


ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು.


ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.


ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು.


ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.


ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.


ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


“ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.


ನೀನು ಉಂಡರೂ ತೃಪ್ತಿಯಾಗದೆ ಇರುವೆ; ನಿನ್ನೊಳಗೆ ಹಸಿವೆಯು ಇರುವುದು; ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಅದರ ಶಕ್ತಿ ಹೆಚ್ಚಾಗಿರುವುದರಿಂದ ನೀನು ಕೆಲಸಕ್ಕಾಗಿ ಅದನ್ನೇ ನಂಬಿರುವೆಯಾ? ನಿನ್ನ ಭಾರವಾದ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯಾ?


ಯೆಹೂದರೊಂದಿಗೆ ಯೆಹೋವ ದೇವರು ಆಪಾದನೆ ಮಾಡಿ, ಯಾಕೋಬನನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ, ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ, ಅವನಿಗೆ ಪ್ರತಿಫಲವನ್ನು ಕೊಡುವರು.


ಕಪ್ಪು ಕುದುರೆಗಳ ರಥ, ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳು ಪಶ್ಚಿಮಕ್ಕೆ ಹಿಂದೆ ಹೋಯಿತು. ಮಚ್ಚೆ ಮಚ್ಚೆಯ ಕುದುರೆಯ ರಥ ದಕ್ಷಿಣಕ್ಕೆ ಹೊರಟಿತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು