ಯೆಶಾಯ 31:2 - ಕನ್ನಡ ಸಮಕಾಲಿಕ ಅನುವಾದ2 ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. ಆದರೆ ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಗೋ, ಆತನೂ ವಿವೇಕಿ, ತನ್ನ ಮಾತುಗಳನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು; ಕೆಡುಕರ ಮನೆತನಕ್ಕೂ ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಯೆಹೋವನು ಜ್ಞಾನವಂತನಾಗಿದ್ದಾನೆ. ಆತನೇ ಅವರಿಗೆ ವಿರುದ್ಧವಾಗಿ ಸಂಕಟಗಳನ್ನು ಬರಮಾಡುವನು. ದೇವರ ಆಜ್ಞೆಯನ್ನು ಜನರು ಬದಲಾಯಿಸಲಾಗುವದಿಲ್ಲ. ಯೆಹೋವನು ಎದ್ದು ದುಷ್ಟಜನರ (ಯೆಹೂದ) ವಿರುದ್ಧ ಯುದ್ಧ ಮಾಡುವನು. ಅವರಿಗೆ ಸಹಾಯ ಕೊಡುವವರ (ಈಜಿಪ್ಟ್) ವಿರುದ್ಧವಾಗಿಯೂ ಯುದ್ಧ ಮಾಡುವನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.