Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:10 - ಕನ್ನಡ ಸಮಕಾಲಿಕ ಅನುವಾದ

10 ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷೆಯ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿರ್ಭೀತರೇ, ಒಂದು ವರುಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ; ದ್ರಾಕ್ಷೆಯ ಕೊಯ್ಲು ಇಲ್ಲದೆ ಹೋಗುವದು, ಯಾವ ಬೆಳೆಯೂ ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿಹಣ್ಣುಗಳೇ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:10
14 ತಿಳಿವುಗಳ ಹೋಲಿಕೆ  

“ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’ ”


ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.


ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.


ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು, ಅವಳು ಹೇಳಿದ ಅವಳ ದ್ರಾಕ್ಷಿಬಳ್ಳಿಗಳನ್ನು, ಅವಳ ಅಂಜೂರದ ಮರಗಳನ್ನು ನಾನು ಹಾಳು ಮಾಡಿ, ಅವುಗಳನ್ನು ನಾನು ಕಾಡನ್ನಾಗಿ ಮಾಡುವೆನು. ಕಾಡುಮೃಗಗಳು ಅವುಗಳನ್ನು ನುಂಗುವವು.


ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೊಲಗಿವೆ. ದ್ರಾಕ್ಷಿತೋಟಗಳಲ್ಲಿ ಕೀರ್ತನೆಗಳಾಗಲೀ, ಆರ್ಭಟವಾಗಲೀ ಇರುವದಿಲ್ಲ. ದ್ರಾಕ್ಷಿ ತೊಟ್ಟಿಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.


ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು