Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:14 - ಕನ್ನಡ ಸಮಕಾಲಿಕ ಅನುವಾದ

14 ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅರಮನೆಯು ಬಿಕೋ ಎನ್ನುವದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವದು, ಓಫೆಲ್ ಗುಡ್ಡವೂ ಕೋವರವೂ ಯಾವಾಗಲೂ ಗುಹೆಗಳಾಗಿಯೂ ಕಾಡುಕತ್ತೆಗಳಿಗೆ ಉಲ್ಲಾಸಕರವಾಗಿಯೂ ದನಕುರಿಗಳಿಗೆ ಕಾವಲಾಗಿಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:14
27 ತಿಳಿವುಗಳ ಹೋಲಿಕೆ  

ಕೋಟೆಯ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗುವುದು. ಅಲ್ಲಿ ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅವು ಅಲ್ಲಿನ ಚಿಗುರುಗಳನ್ನು ತಿಂದುಬಿಡುವುವು.


ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.


ಪಟ್ಟಣದಲ್ಲಿ ಹಾಳೇ ಉಳಿದಿವೆ. ನಾಶನವು ಹೆಬ್ಬಾಗಿಲಿಗೆ ಬಡಿದಿದೆ.


ಹಾಳುಪಟ್ಟಣವು ಬಿದ್ದುಹೋಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.


ಅವು ಕಾಡಿನ ಮೃಗಗಳಿಗೆಲ್ಲಾ ನೀರು ಕುಡಿಸುತ್ತವೆ; ಕಾಡುಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.


ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.


ಏಳಿರಿ, ರಾತ್ರಿಯಲ್ಲಿ ದಾಳಿಮಾಡೋಣ. ಅವಳ ಕೋಟೆಗಳನ್ನು ನಾಶಮಾಡೋಣ.”


ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.”


ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.


ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.


ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು.


“ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು.


ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ಮೀನು ಬಾಗಿಲ ದ್ವಾರದವರೆಗಿರುವ ತಗ್ಗಿನಲ್ಲಿ ಓಫೇಲ್ ಗುಡ್ಡದ ಸುತ್ತಲೂ ಗೋಡೆಯನ್ನು ಕಟ್ಟಿಸಿ, ಅದನ್ನು ಬಹಳ ಎತ್ತರಮಾಡಿ, ಯೆಹೂದದ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.


ಆ ಮೂಲೆ ಬುರುಜಿನ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ನಿವಾಸ ಸ್ಥಾನವು.


ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು