Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:16 - ಕನ್ನಡ ಸಮಕಾಲಿಕ ಅನುವಾದ

16 ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸತ್ಯಸಂಧತೆ ಕಾಡುಮೇಡೆನ್ನದೆ ಎಲ್ಲೆಡೆ ನೆಲೆಗೊಳ್ಳುವುದು. ಸರ್ವರೂ ಸತ್ಯಸಂಧರಾಗಿರುವುದರಿಂದ ಸಮಾಧಾನ ನೆಲೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನ್ಯಾಯವು ಅಡವಿಯಲ್ಲಿಯೂ ನೆಲೆಗೊಳ್ಳುವದು, ಧರ್ಮವು ತೋಟದಲ್ಲಿ ಇದ್ದೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:16
17 ತಿಳಿವುಗಳ ಹೋಲಿಕೆ  

ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.


ಯೆಹೋವ ದೇವರು ಉನ್ನತೋನ್ನತನಾಗಿದ್ದಾನೆ. ಏಕೆಂದರೆ ಆತನು ಮೇಲಿನ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿ ಮತ್ತು ನ್ಯಾಯಗಳಿಂದ ತುಂಬಿಸಿದ್ದಾನೆ.


ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ. ಕೇದಾರ್ ಊರಿನ ನಿವಾಸಿಗಳು ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ. ಸೆಲ ಪಟ್ಟಣದವರೂ ಹರ್ಷಧ್ವನಿಗೈಯಲಿ; ಅವರು ಪರ್ವತದ ತುದಿಯಲ್ಲಿ ಆರ್ಭಟಿಸಲಿ.


ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ, ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು,


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”


ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು