Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:17 - ಕನ್ನಡ ಸಮಕಾಲಿಕ ಅನುವಾದ

17 ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಧರ್ಮದಿಂದ ಸಮಾಧಾನವು ಫಲಿಸುವದು, ಶಾಂತಿ ನಿರ್ಭಯಗಳು ಧರ್ಮದ ನಿತ್ಯಪರಿಣಾಮವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಅಲ್ಲಿ ಆ ಸಮಾಧಾನ ಮತ್ತು ಭದ್ರತೆ ನಿತ್ಯವೂ ಶಾಶ್ವತವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:17
35 ತಿಳಿವುಗಳ ಹೋಲಿಕೆ  

ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವೆ, ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.


ನಿಮ್ಮ ನಿಯಮ ಪ್ರಿಯರಿಗೆ ಅಪಾರ ಸಮಾಧಾನವಿರುತ್ತದೆ, ಅಂಥವರಿಗೆ ಆತಂಕವೇನೂ ಇರುವುದಿಲ್ಲ.


ಯೆಹೋವ ದೇವರು ಏನು ಹೇಳುತ್ತಾರೋ ಅದನ್ನು ನಾನು ಕೇಳುವೆನು. ದೇವರು ತಮ್ಮ ಜನರಿಗೂ ತಮ್ಮ ಭಕ್ತರಿಗೂ ಸಮಾಧಾನವನ್ನು ವಾಗ್ದಾನಮಾಡುವರು. ಆದರೆ ಅವರ ಜನರು ಇನ್ನು ಬುದ್ಧಿಹೀನತೆಗೆ ತಿರುಗಿಕೊಳ್ಳದೆ ಇರಲಿ.


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಏಕೆಂದರೆ ಯೇಸು ಎಂಥವರಾಗಿದ್ದಾರೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.


ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವುದಿಲ್ಲ. ನಾನು ನನ್ನ ಆತ್ಮವನ್ನು ಇಸ್ರಾಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ನೀವು ಆನಂದದೊಡನೆ ಹೋಗುವಿರಿ, ಸಮಾಧಾನದಿಂದ ಬರುವಿರಿ. ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವುವು.


ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.


ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ, ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು,


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನದಿಯಂತೆ ಸಮಾಧಾನವನ್ನೂ, ಹರಿಯುವ ಹಳ್ಳದಂತೆ ಜನಾಂಗಗಳ ವೈಭವವನ್ನೂ ಆಕೆಯ ಕಡೆಗೆ ಬರಮಾಡುವೆನು. ಆಗ ನೀವು ಪಾನ ಮಾಡುವಿರಿ; ನಿಮ್ಮನ್ನು ಆಕೆಯ ಪಕ್ಕೆಯಲ್ಲಿ ಎತ್ತಿಕೊಂಡುಹೋಗುವರು. ನೀವು ಆಕೆಯ ಮಡಿಲಲ್ಲಿ ನಲಿದಾಡುವಿರಿ.


ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು. ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.


ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಯಾವ ಶಿಕ್ಷೆಯಾದರೂ ಆ ಸಮಯಕ್ಕೆ ಸಂತೋಷಕರವಾಗಿ ತೋಚದೆ, ದುಃಖಕರವಾಗಿ ತೋಚುತ್ತದೆ. ತರುವಾಯ, ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನವುಳ್ಳ ನೀತಿಯ ಫಲವನ್ನು ಕೊಡುತ್ತದೆ.


ಪ್ರೀತಿಯೂ ಸತ್ಯತೆಯೂ ಸಂಧಿಸಿಕೊಳ್ಳುತ್ತವೆ. ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುತ್ತವೆ.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.


ಮೊರ್ದೆಕೈಯೂ ದಯೆ ಹಾಗೂ ಭರವಸೆಯ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತಗಳಲ್ಲಿರುವ ಸಮಸ್ತ ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದನು.


ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು, ಕೇಡಿನ ಭಯವಿಲ್ಲದೇ ನೆಮ್ಮದಿಯಿಂದ ಇರುವರು.”


ಅವರು ನಿಮ್ಮ ಸಮಯಕ್ಕೆ ಖಚಿತವಾದ ಆಧಾರವಾಗುತ್ತಾರೆ. ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾಗಿಯೂ ಇರುವನು. ಯೆಹೋವ ದೇವರ ಭಯವೇ ಅವನ ಬೊಕ್ಕಸವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು