Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:1 - ಕನ್ನಡ ಸಮಕಾಲಿಕ ಅನುವಾದ

1 ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸೂರೆಯಾಗದಿದ್ದರೂ ಸೂರೆಮಾಡಿದಿ, ಬಾಧೆಪಡದಿದ್ದರೂ ಬಾಧಿಸಿದಿ; ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ! ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:1
25 ತಿಳಿವುಗಳ ಹೋಲಿಕೆ  

ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”


ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ.


ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”


“ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.


ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು.


ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”


ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.


ನೀನು ಕೇಳಿಲ್ಲ, ತಿಳಿದೂ ಇಲ್ಲ. ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ. ಏಕೆಂದರೆ ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ನೀನು ದ್ರೋಹಿ ಎಂದೂ ನಾನು ತಿಳಿದುಕೊಂಡಿದ್ದೇನೆ.


ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.


ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು