Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:17 - ಕನ್ನಡ ಸಮಕಾಲಿಕ ಅನುವಾದ

17 ಅವರೇ ಅವುಗಳಿಗೋಸ್ಕರ ಚೀಟು ಹಾಕಿದ್ದಾರೆ. ಅವರ ಕೈಯೇ ಅದನ್ನು ಗೆರೆ ಎಳೆದು, ಅವರಿಗೆ ಹಂಚಿಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿಕೊಳ್ಳುವುವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನೇ ಇವುಗಳಿಗೆ ಪಾಲುಮಾಡಿಕೊಟ್ಟಿದ್ದಾನೆ, ಆತನ ಕೈಯೇ ನೂಲುಹಾಕಿ ದೇಶವನ್ನು ಹಂಚಿದೆ; ಅದು ಇವುಗಳಿಗೆ ನಿತ್ಯಸ್ವಾಸ್ತ್ಯವಾಗುವದು, ಅವು ತಲತಲಾಂತರಕ್ಕೂ ಅಲ್ಲಿ ವಾಸಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರ್ಷವರ್ಷವೂ ಅವುಗಳು ಅಲ್ಲಿಯೇ ವಾಸಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:17
11 ತಿಳಿವುಗಳ ಹೋಲಿಕೆ  

ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏಳುತ್ತಿರುವುದು. ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರುವುದು, ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.


ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.


ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.


ಆ ಮನುಷ್ಯರು ನಾಡನ್ನು ಅಳತೆ ಮಾಡುವುದಕ್ಕಾಗಿ ಹೊರಟು ಹೋಗುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ನೀವು ಹೋಗಿ ದೇಶವೆಲ್ಲಾ ಸಂಚರಿಸಿ, ಅದನ್ನು ಅಳತೆಮಾಡಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ನಾನು ಇಲ್ಲಿ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ನಿಮಗೆ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ಬನ್ನಿರಿ,” ಎಂದು ಅಪ್ಪಣೆಕೊಟ್ಟನು.


ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.


ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.


ಆದರೆ ಬಕಪಕ್ಷಿಯು ಮತ್ತು ಮುಳ್ಳುಹಂದಿಯು ಅದನ್ನು ಆವರಿಸಿಕೊಳ್ಳುವುವು. ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವುವು. ಗಲಿಬಿಲಿ ಎಂಬ ನೂಲನ್ನು, ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು