Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:2 - ಕನ್ನಡ ಸಮಕಾಲಿಕ ಅನುವಾದ

2 ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮರುಭೂಮಿಯು ಹರ್ಷದಿಂದ ಅರಳಿದ ಹೂಗಳಿಂದ ತುಂಬಿಹೋಗುವುದು. ಸಂತೋಷದಿಂದ, ಕುಣಿದಾಡುವದೋ ಎಂಬಂತೆ ತೋರುವದು. ಲೆಬನೋನಿನ ಅರಣ್ಯದಂತೆಯೂ ಕರ್ಮೆಲ್ ಬೆಟ್ಟದಂತೆಯೂ ಶಾರೋನಿನ ಕಣಿವೆಯಂತೆಯೂ ಮನೋಹರವಾಗಿರುವದು. ಇವೆಲ್ಲಾ ನೆರವೇರುವದು ಯಾಕೆಂದರೆ ಎಲ್ಲಾ ಜನರು ಯೆಹೋವನ ಮಹಿಮೆಯನ್ನು ನಮ್ಮ ದೇವರ ಪ್ರಭಾವವನ್ನೂ ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:2
57 ತಿಳಿವುಗಳ ಹೋಲಿಕೆ  

ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.


ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಆಗ ಯೆಹೋವ ದೇವರ ಮಹಿಮೆಯು ಗೋಚರವಾಗುವುದು. ಮಾನವರೆಲ್ಲರೂ ಒಟ್ಟಿಗೆ ಅದನ್ನು ಕಾಣುವರು. ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.”


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.


ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ನಿನ್ನ ತಲೆಯು ಕರ್ಮೆಲ್ ಬೆಟ್ಟದಂತೆ ವೈಭವ. ನಿನ್ನ ತಲೆಕೂದಲು ಧೂಮ್ರ ಬಣ್ಣದ ಹಾಗೆ ಇದೆ. ಹೆಣೆದ ಆ ಜಡೆಯಿಂದ ಅರಸನಿಗೂ ಆಕರ್ಷಣ.


ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.


ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯವರೆಗೂ ಇರಲಿ; ಅದರ ಫಲವು ಲೆಬನೋನಿನ ಹಾಗೆ ಸಮೃದ್ಧಿಯಾಗಲಿ; ಪಟ್ಟಣದವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿ ಆಗಲಿ.


ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ಮತ್ತೊಂದು ಕಡೆಯಲ್ಲಿ ಹೀಗೆ ಬರೆಯಲಾಗಿದೆ: “ಯೆಹೂದ್ಯರಲ್ಲದವರೇ ದೇವಜನರೊಂದಿಗೆ ಸೇರಿ ಸಂತೋಷಪಡಿರಿ.”


ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.


ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.


ಮರುಭೂಮಿಯಲ್ಲಿ ದೇವದಾರು, ಜಾಲೀಮರ, ಸುಗಂಧ, ಓಲಿವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.


ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.


ಆಕಾಶವು ಅವರ ನೀತಿಯನ್ನು ತಿಳಿಸುತ್ತದೆ; ಎಲ್ಲಾ ಜನಗಳು ಅವರ ಮಹಿಮೆಯನ್ನು ಕಾಣುತ್ತಾರೆ.


ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.


ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. ದೇವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ.


ಲುದ್ದ ಹಾಗೂ ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.


ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು.


ಅವರು ಗಿಲ್ಯಾದಿನಲ್ಲಿರುವ ಬಾಷಾನಿನಲ್ಲಿಯೂ, ಅವರ ಊರುಗಳಲ್ಲಿಯೂ, ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.


ಶಾರೋನಿನ ಗುಲಾಬಿ ಹೂವೂ, ತಗ್ಗಿನ ತಾವರೆಯೂ ನಾನೇ.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.


“ಯೆರೂಸಲೇಮಿನ ಸಂಗಡ ನೀವು ಸಂತೋಷಿಸಿರಿ. ಅವಳನ್ನು ಪ್ರೀತಿ ಮಾಡುವವರೆಲ್ಲಾ ಆಕೆಯೊಂದಿಗೆ ಉಲ್ಲಾಸಪಡಿರಿ. ಅವಳಿಗೋಸ್ಕರ ದುಃಖಿಸಿದವರೆಲ್ಲರೂ, ಆಕೆಯ ಸಂತೋಷಕ್ಕಾಗಿ ಆನಂದಪಡಿರಿ.


ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲ್, ಶೀಹೋರ್ ಲಿಬ್ನತ್ ಕಡೆ ಹೋಗಿ,


ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಜವಾಬ್ದಾರಿಯಾಗಿದ್ದನು. ತಗ್ಗುಗಳಲ್ಲಿರುವ ದನಗಳ ಮೇಲೆ ಅಡ್ಲಾಯಿಯ ಮಗನಾದ ಶಾಫಾಟನು ಜವಾಬ್ದಾರಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು