Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:6 - ಕನ್ನಡ ಸಮಕಾಲಿಕ ಅನುವಾದ

6 ಆಗ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು. ಏಕೆಂದರೆ ಮರುಭೂಮಿಯಲ್ಲಿ ನೀರೂ, ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:6
41 ತಿಳಿವುಗಳ ಹೋಲಿಕೆ  

ಯೇಸು ಒಂದು ಮೂಕದೆವ್ವವನ್ನು ಹೊರಗೆ ಓಡಿಸುತ್ತಿದ್ದರು. ಆ ದೆವ್ವವು ಹೊರಟುಹೋದ ಮೇಲೆ, ಆ ಮೂಕನು ಮಾತನಾಡಿದನು. ಅದಕ್ಕೆ ಜನರು ಆಶ್ಚರ್ಯಪಟ್ಟರು.


ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು.


ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.


ಕರ್ತಾ, ನನ್ನ ತುಟಿಗಳನ್ನು ತೆರೆಯಿರಿ. ಆಗ ನನ್ನ ಬಾಯಿ ನಿಮ್ಮ ಸ್ತೋತ್ರವನ್ನು ಪ್ರಸಿದ್ಧಿ ಮಾಡುವುದು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು.


ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು.


ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು.


ಆಗ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಅವರ ಬಳಿಗೆ ಬಂದರು. ಯೇಸು ಅವರನ್ನು ಸ್ವಸ್ಥಮಾಡಿದರು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ಅರಣ್ಯವೂ, ಮರುಭೂಮಿಯೂ ಆನಂದಿಸುವುದು: ಒಣ ನೆಲವು ಹರ್ಷಿಸಿ, ತಾವರೆಯಂತೆ ಕಳಕಳಿಸುವುದು.


ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.


ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.


ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.


ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.


ನಿನ್ನ ಹಗ್ಗಗಳು ಸಡಲಿ, ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು. ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.


ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ. ಕೇದಾರ್ ಊರಿನ ನಿವಾಸಿಗಳು ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ. ಸೆಲ ಪಟ್ಟಣದವರೂ ಹರ್ಷಧ್ವನಿಗೈಯಲಿ; ಅವರು ಪರ್ವತದ ತುದಿಯಲ್ಲಿ ಆರ್ಭಟಿಸಲಿ.


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ದೇವರು ಮರುಭೂಮಿಯನ್ನು ನೀರಿನ ಕೆರೆಯಾಗಿಯೂ, ಒಣ ಭೂಮಿಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸಿದರು.


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು