Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:4 - ಕನ್ನಡ ಸಮಕಾಲಿಕ ಅನುವಾದ

4 ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದಳಪತಿ ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ : “ನಿನ್ನ ಭರವಸೆಗೆ ಆಧಾರವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ರಬ್ಷಾಕೆಯು ಅವರಿಗೆ - ನೀವು ಹೋಗಿ ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ - ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೇನಾದಂಡನಾಯಕನು ಅವರಿಗೆ, “ಮಹಾರಾಜನಾದ ಅಶ್ಶೂರದ ಅರಸನು ಹಿಜ್ಕೀಯನಿಗೆ ಹೇಳುವುದನ್ನು ನೀವು ಹೋಗಿ ಅವನಿಗೆ ತಿಳಿಸಿರಿ. ಅವನು ಹೇಳುವುದೇನೆಂದರೆ: “‘ನೀನು ಯಾವುದರ ಮೇಲೆ ಭರವಸವಿಟ್ಟಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:4
17 ತಿಳಿವುಗಳ ಹೋಲಿಕೆ  

ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


“ನಿನ್ನ ದೇವರು ಎಲ್ಲಿ?” ಎಂದು ದಿನವೆಲ್ಲಾ ನನಗೆ ಹೇಳಿ ನನ್ನ ವೈರಿಗಳು ಅಪಹಾಸ್ಯ ಮಾಡುವುದರಿಂದ ನನ್ನ ಎಲಬುಗಳೆಲ್ಲಾ ಮುರಿದುಹೊದಂತೆ ಇವೆ.


“ನಿನ್ನ ದೇವರು ಎಲ್ಲಿ?” ಎಂದು ಜನರು, ದಿನವೆಲ್ಲಾ ನನ್ನನ್ನು ಕೇಳುವುದರಿಂದ ಹಗಲುರಾತ್ರಿ ನನ್ನ ಕಣ್ಣೀರೇ ನನಗೆ ಆಹಾರವಾಗಿದೆ.


“ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ.


ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು.


“ ‘ನಾವು ಪರಾಕ್ರಮಶಾಲಿಗಳೂ, ಯುದ್ಧಕ್ಕೆ ಬಲಿಷ್ಠರೂ,’ ಎಂದು ನೀವು ಹೇಳುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು