Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:2 - ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ : “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಿಜ್ಕೀಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶೆಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕವಸ್ತ್ರಗಳನ್ನು ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:2
15 ತಿಳಿವುಗಳ ಹೋಲಿಕೆ  

ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.


ಆಗ ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವನ ಬಳಿಗೆ ಬಂದರು.


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು.


ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.


ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನ ಎಂಬ ಖಜಾಂಚಿಯ ಬಳಿಗೆ ಹೋಗಿ ಹೀಗೆ ಹೇಳು:


“ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,


ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.


ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು.


ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು