Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:25 - ಕನ್ನಡ ಸಮಕಾಲಿಕ ಅನುವಾದ

25 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 [ಪರದೇಶಗಳಲ್ಲಿ] ಅಗೆದು ನೀರು ತೆಗೆದು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಕೊಚ್ಚಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:25
8 ತಿಳಿವುಗಳ ಹೋಲಿಕೆ  

ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು.


ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.


ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ.


ಕಾಲುವೆಗಳು ನಾರುವುವು. ಈಜಿಪ್ಟನ ಉಪನದಿಗಳು ದೂರಕ್ಕೆ ಇಳಿದು ನೀರಿಲ್ಲದೆ ಹೋಗುವುವು. ಜಂಬು ಹುಲ್ಲು ಬಾಡುವುದು.


ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, “ ‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿಗಳನ್ನು ಕೊಳ್ಳೆಹೊಡೆದು, ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.


ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಕೂಡಿಸುವಂತೆ, ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬಾಯಿತೆರೆದು ಕೀಚುಗುಟ್ಟಲು ಯಾರೂ ಇರಲಿಲ್ಲ.’ ”


ನೈಲ್ ನದಿಯ ನೀರು ಬತ್ತಿಹೋಗುವುದು. ನದಿ ತೀರವೂ ಇಂಗಿ ಒಣಗಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು