Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:30 - ಕನ್ನಡ ಸಮಕಾಲಿಕ ಅನುವಾದ

30 “ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ, “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು : ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯಮಾಡಿ ಶೇಖರಿಸಿದ್ದನ್ನು ಅನುಭವಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಈ ಮಾತುಗಳು ನೆರವೇರುವವೆಂಬದಕ್ಕೆ ನೀವು ಈ ವರುಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರುಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷೇತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವದೇ ಗುರುತಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಗ ಯೆಹೋವನು ಹಿಜ್ಕೀಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದ್ದರಿಂದ ಈ ವರ್ಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ನೀನು ಊಟಮಾಡುವೆ. ಆದರೆ ಮೂರನೆಯ ವರ್ಷದಲ್ಲಿ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಆ ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:30
12 ತಿಳಿವುಗಳ ಹೋಲಿಕೆ  

“ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಯೆಶಾಯನು, “ಯೆಹೋವ ದೇವರು, ತಾವು ಹೇಳಿದ ಕಾರ್ಯವನ್ನು ಮಾಡುವರೆಂಬುದಕ್ಕೆ ಯೆಹೋವ ದೇವರ ಕಡೆಯಿಂದ ನಿನಗೆ ಉಂಟಾಗುವ ಗುರುತು, ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಬರಬೇಕೋ?” ಎಂದು ಕೇಳಿದನು.


ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


“ ‘ಯೆಹೋವ ದೇವರು ತಾವು ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ.


ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು.


“ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು.


ಇದಲ್ಲದೆ ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು