Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:35 - ಕನ್ನಡ ಸಮಕಾಲಿಕ ಅನುವಾದ

35 “ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಉಳಿಸಿ ಕಾಪಾಡುವೆನು ಎಂದು ಹೇಳುತ್ತಾನೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:35
19 ತಿಳಿವುಗಳ ಹೋಲಿಕೆ  

ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ಕಾಪಾಡುವೆನು.


ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ. ನಿನ್ನನ್ನೂ, ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ, ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನು,’ ಎಂದು ಹೇಳು,” ಎಂದರು.


ರೆಕ್ಕೆಗಳನ್ನು ಚಾಚಿದ ಪಕ್ಷಿಗಳಂತೆ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮನ್ನು ಕಾಪಾಡುವರು. ಅದನ್ನು ರಕ್ಷಿಸಿ ಕಾಯುವರು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವರು.


ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.


“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, ನಾನು ಅವರಿಗೋಸ್ಕರ ಎಬ್ಬಿಸುವ ಅವರ ಅರಸನಾದ ದಾವೀದನಿಗೂ ಸೇವೆಮಾಡುವರು.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


“ಆದ್ದರಿಂದ ನೀನು ಇಸ್ರಾಯೇಲರ ಮನೆತನದವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡುತ್ತಿಲ್ಲ. ಆದರೆ ನೀವು ಇತರ ಜನಾಂಗಗಳ ನಡುವೆ ಅಪವಿತ್ರಪಡಿಸಿದ ನನ್ನ ಪರಿಶುದ್ಧ ನಾಮಕ್ಕಾಗಿ ಮಾಡುತ್ತೇನೆ.


ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.


ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.


ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.


ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.”


ಯೆಹೋವ ದೇವರೇ, ನಿಮ್ಮ ಸೇವಕನ ನಿಮಿತ್ತವಾಗಿಯೂ, ನಿಮ್ಮ ಚಿತ್ತಾನುಸಾರವಾಗಿಯೂ ಈ ಮಹಾಕಾರ್ಯಗಳನ್ನೆಲ್ಲಾ ನಡೆಸಿ, ಎಲ್ಲ ವಾಗ್ದಾನಗಳನ್ನು ತಿಳಿಯಪಡಿಸಿರುವಿರಿ.


ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು