Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 39:1 - ಕನ್ನಡ ಸಮಕಾಲಿಕ ಅನುವಾದ

1 ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅದೇ ಕಾಲದಲ್ಲಿ ಬಲದಾನನ ಮಗನು ಹಾಗೂ ಬಾಬಿಲೋನಿಯದ ಅರಸನು ಆದ ಮೆರೋದಕಬಲದಾನ ಎಂಬವನು, ರಾಜ ಹಿಜ್ಕೀಯನು ರೋಗದಿಂದ ಗುಣಹೊಂದಿದನು ಎಂದು ಕೇಳಿ ಅವನಿಗೆ ಉಡುಗೊರೆಯೊಂದಿಗೆ ಒಂದು ಪತ್ರವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ ಬಹುಮಾನವನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಮಯದಲ್ಲಿ ಬಲದಾನ್ ಎಂಬವನ ಮಗನಾದ ಮೆರೋದಕಬಲದಾನ್ ಎಂಬವನು ಬಾಬಿಲೋನಿನ ಅರಸನಾಗಿದ್ದನು. ಅವನಿಗೆ ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂಬ ವರ್ತಮಾನ ತಲುಪಿದ್ದರಿಂದ ಅವನು ಹಿಜ್ಕೀಯನಿಗೆ ಒಂದು ಪತ್ರವನ್ನೂ ಜೊತೆಗೆ ಬಹುಮಾನಗಳನ್ನೂ ತನ್ನ ದೂತರ ಸಂಗಡ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 39:1
11 ತಿಳಿವುಗಳ ಹೋಲಿಕೆ  

ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.


ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬಿಲೋನಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: ಹೀಗೆ ದಬ್ಬಾಳಿಕೆಗಾರನು ಕೊನೆಗೊಂಡನು. ಅವನ ಕೋಪ ಹೀಗೆ ಮುಗಿಯಿತು.


ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.


ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:


ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.


ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.


ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.


ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.


ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು