Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:1 - ಕನ್ನಡ ಸಮಕಾಲಿಕ ಅನುವಾದ

1 ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿಮ್ಮ ದೇವರು ಇಂತೆನ್ನುತ್ತಾರೆ : “ಸಂತೈಸಿ, ನನ್ನ ಜನರನ್ನು ಸಂತೈಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿನ್ನ ದೇವರು ಹೇಳುವುದೇನೆಂದರೆ: “ನನ್ನ ಜನರನ್ನು ಸಂತೈಸು, ಸಂತೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:1
29 ತಿಳಿವುಗಳ ಹೋಲಿಕೆ  

ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು, ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.


ನಾನು ಮೊದಲನೆಯವನಾಗಿ ಚೀಯೋನಿಗೆ, ‘ಇಗೋ, ಅವರನ್ನು ನೋಡು’ ಎಂದು ಹೇಳಿ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ಯೆಹೋವ ದೇವರು ಏನು ಹೇಳುತ್ತಾರೋ ಅದನ್ನು ನಾನು ಕೇಳುವೆನು. ದೇವರು ತಮ್ಮ ಜನರಿಗೂ ತಮ್ಮ ಭಕ್ತರಿಗೂ ಸಮಾಧಾನವನ್ನು ವಾಗ್ದಾನಮಾಡುವರು. ಆದರೆ ಅವರ ಜನರು ಇನ್ನು ಬುದ್ಧಿಹೀನತೆಗೆ ತಿರುಗಿಕೊಳ್ಳದೆ ಇರಲಿ.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,


ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ.


ನಿಮ್ಮ ಕೋಪವನ್ನೆಲ್ಲಾ ತೆಗೆದುಬಿಟ್ಟಿದ್ದೀರಿ. ನಿಮ್ಮ ಬೇಸರದಿಂದ ತಿರುಗಿಕೊಂಡಿದ್ದೀರಿ.


ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.


“ಪುನಃ ನೀನು ಸಾರಿ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವುವು. ಯೆಹೋವ ದೇವರು ಚೀಯೋನನ್ನು ಆದರಿಸುವರು. ಯೆರೂಸಲೇಮನ್ನು ಆರಿಸಿಕೊಳ್ಳುವರು, ಎಂದು ಹೇಳಿದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು