Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:2 - ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜೆರುಸಲೇಮಿನೊಂದಿಗೆ ಕರುಣೆಯಿಂದ ಮಾತಾಡು. ಜೆರುಸಲೇಮಿಗೆ ಹೀಗೆ ಹೇಳು, ‘ನಿನ್ನ ಸೆರೆವಾಸದ ಸಮಯವು ಅಂತ್ಯವಾಯಿತು. ನೀನು ನಿನ್ನ ಪಾಪಗಳ ಶಿಕ್ಷೆಯನ್ನು ಅನುಭವಿಸಿದೆ.’ ಜೆರುಸಲೇಮ್ ಮಾಡಿದ ಪ್ರತಿಯೊಂದು ಪಾಪಕೃತ್ಯಗಳಿಗಾಗಿ ಯೆಹೋವನು ಎರಡು ಬಾರಿ ಶಿಕ್ಷಿಸಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:2
54 ತಿಳಿವುಗಳ ಹೋಲಿಕೆ  

ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರುಗಿರಿ. ಎರಡರಷ್ಟು ಕೊಡುವೆನೆಂದು ನಿನಗೆ ಈ ಹೊತ್ತೇ ಪ್ರಕಟಿಸುತ್ತೇನೆ.


ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು.


ಆದ್ದರಿಂದ ನಾನು ಅವಳನ್ನು ಮೋಹಿಸಿ, ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, ಅವಳ ಸಂಗಡ ಹಿತಕರವಾಗಿ ಮಾತನಾಡುವೆನು.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.”


“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.


ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.


ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.


ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು.


ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.


ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.


ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.


ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.


ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.


ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಅವನು ಆ ಹುಡುಗಿಯನ್ನು ಪ್ರೀತಿಸಿ, ಆಕೆಯೊಂದಿಗೆ ಅನುರಾಗದಿಂದ ಮಾತನಾಡಿದನು.


ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.


ಯೆಹೋವ ದೇವರು ನಿಮ್ಮ ಸಂಕಟದಿಂದಲೂ, ಕಳವಳದಿಂದಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ


ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ, ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ದಾಳಿಮಾಡುತ್ತಾರೋ, ಅವರು ನಿನಗೆ ಅಧೀನವಾಗುವರು.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ತಾಯಿ ತನ್ನ ಮಗುವನ್ನು ಆದರಿಸುವ ಪ್ರಕಾರವೇ, ನಾನು ನಿಮ್ಮನ್ನು ಆದರಿಸುವೆನು. ಯೆರೂಸಲೇಮಿನ ನಿಮಿತ್ತವೇ, ಆದರಣೆ ಪಡುವಿರಿ.”


“ ‘ಯೆಹೋವ ದೇವರು ನಮ್ಮ ನೀತಿಯನ್ನು ಹೊರಗೆ ತಂದಿದ್ದಾರೆ; ಬನ್ನಿ, ನಮ್ಮ ದೇವರಾದ ಯೆಹೋವ ದೇವರ ಕ್ರಿಯೆಯನ್ನು ಚೀಯೋನಿನಲ್ಲಿ ಸಾರಿ ಹೇಳೋಣ.’


ಚೀಯೋನ್ ಪುತ್ರಿಯೇ, ನಿನ್ನ ಅಕ್ರಮದ ಶಿಕ್ಷೆಯು ತೀರಿ ಹೋಯಿತು. ಅವರು ಇನ್ನು ಮೇಲೆ ನಿನ್ನ ಗಡಿಪಾರನ್ನು ಹೆಚ್ಚಿಸುವುದಿಲ್ಲ. ಎದೋಮಿನ ಪುತ್ರಿಯೇ, ಅವರು ನಿನ್ನ ಅಕ್ರಮವನ್ನು ವಿಚಾರಿಸುವನು. ಆತನು ನಿನ್ನ ಪಾಪಗಳನ್ನು ಬಹಿರಂಗಪಡಿಸುವರು.


ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ.


ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.


ಅವನು ಕಳ್ಳತನ ಮಾಡುವಾಗ ಸೂರ್ಯೋದಯವಾದರೆ, ಹೊಡೆದವನ ರಕ್ತ ಸುರಿಸಬೇಕು. “ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂದಿರುಗಿಸಬೇಕು. ಅವನಲ್ಲಿ ಕೊಡಲು ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.


ನಿಮ್ಮ ಕೋಪವನ್ನೆಲ್ಲಾ ತೆಗೆದುಬಿಟ್ಟಿದ್ದೀರಿ. ನಿಮ್ಮ ಬೇಸರದಿಂದ ತಿರುಗಿಕೊಂಡಿದ್ದೀರಿ.


ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.


ಯೆಹೋವ ದೇವರು ಹೀಗೆನ್ನುತ್ತಾರೆ, “ಆ ದಿವಸದಲ್ಲಿ,” “ನೀನು ನನ್ನನ್ನು ಇನ್ನು ಮೇಲೆ, ‘ನನ್ನ ಒಡೆಯ’ ಎಂದು ಕರೆಯದೆ, ‘ನನ್ನ ಪತಿ’ ಎಂದು ಕರೆಯುವೆ.


ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು