Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:27 - ಕನ್ನಡ ಸಮಕಾಲಿಕ ಅನುವಾದ

27 ನನ್ನ ಮಾರ್ಗವು ಯೆಹೋವ ದೇವರಿಗೆ ಮರೆಯಾಗಿದೆ. ನನ್ನ ನ್ಯಾಯವು ನನ್ನ ದೇವರಿಂದ ದಾಟಿಹೋಯಿತಲ್ಲಾ! ಎಂದು ಯಾಕೋಬೇ ಏಕೆ ಹೇಳುತ್ತೀ? ಇಸ್ರಾಯೇಲೇ ಏಕೆ ಮಾತನಾಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯಾಕೋಬೇ, ಇಸ್ರಾಯೇಲೇ, “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕೋಬೇ, ಇಸ್ರಾಯೇಲೇ, ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ ಎಂದು ಏಕೆ ಅಂದುಕೊಳ್ಳುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಕೋಬೇ, ಇದು ಸತ್ಯ! ಇಸ್ರೇಲೇ, ನೀನದನ್ನು ನಂಬಬೇಕು. ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:27
10 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.


ಆದರೆ ಚೀಯೋನ್ ಎಂಬಾಕೆಯು, “ಯೆಹೋವ ದೇವರು ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನ್ನ ಯೆಹೋವ ದೇವರು ನನ್ನನ್ನು ಮರೆತುಬಿಟ್ಟಿದ್ದಾನಲ್ಲಾ!” ಎಂದುಕೊಂಡಳು.


ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ,


“ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ.


ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.


ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.


ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.


ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. ಇಂಥ ಅನೇಕ ಯೋಜನೆಗಳು ದೇವರಲ್ಲಿವೆ.


“ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನೀನು ನನ್ನ ಸೇವಕನಾಗಿದ್ದೀ. ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು. ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು