Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:6 - ಕನ್ನಡ ಸಮಕಾಲಿಕ ಅನುವಾದ

6 ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಹಾ, ವಾಣಿಯು ಮತ್ತೆ ಕೇಳಿಸಿ - ಕೂಗು ಎನ್ನುತ್ತದೆ. ಅದಕ್ಕೆ ನಾನು - ಏನು ಕೂಗಲಿ ಎಂದು ಕೇಳಲು ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ಸ್ವರವು “ಮಾತನಾಡು” ಎಂದಿತು. ಅದಕ್ಕೆ ಮನುಷ್ಯನು, “ಏನು ಮಾತಾಡಲಿ” ಅಂದನು. ಆಗ ಸ್ವರವು, “ಜನರು ಶಾಶ್ವತವಾಗಿ ಜೀವಿಸುವದಿಲ್ಲ, ಅವರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ಒಳ್ಳೆಯತನವು ಕಾಡುಹೂವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:6
17 ತಿಳಿವುಗಳ ಹೋಲಿಕೆ  

ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ.


ಅವನು ಹೂವಿನ ಹಾಗೆ ಅರಳಿ ಬಾಡುವನು; ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ದುಷ್ಟರು ಹುಲ್ಲಿನ ಹಾಗೆ ಚಿಗುರಿದರೂ ಅಕ್ರಮ ಮಾಡುವವರೆಲ್ಲರು ವೃದ್ಧಿ ಆದರೂ ಅವರು ನಿತ್ಯ ದಂಡನೆಗೆ ಗುರಿಯಾಗುವರು.


ಒಂದು ದಿನ ಬರುವದು, ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, ‘ಏಳಿರಿ, ಚೀಯೋನಿಗೆ, ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’ ” ಎಂದು ಕೂಗುವರು.


“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.


“ಮರುಭೂಮಿಯಲ್ಲಿ ಯೆಹೋವ ದೇವರ ಮಾರ್ಗವನ್ನು ಸಿದ್ಧಮಾಡಿರಿ. ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆಮಾಡಿರಿ.


ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


“ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ನನ್ನ ಸಂಗಡ ಮಾತನಾಡಿದ ದೂತನು ನನಗೆ, “ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು