Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು. ಹೂವು ಉದುರಿ ಹೋಗುವುದು. ಮಾನವರೆಲ್ಲರೂ ಹುಲ್ಲೇ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವದರಿಂದ ಹುಲ್ಲು ಒಣಗಿಹೋಗುವದು, ಹೂವು ಬಾಡಿ ಹೋಗುವದು. ಜನವು ಹುಲ್ಲೇ ಹುಲ್ಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:7
15 ತಿಳಿವುಗಳ ಹೋಲಿಕೆ  

ಅದರ ಶ್ವಾಸವೇ ಇದ್ದಲನ್ನು ಹೊತ್ತಿಸುವುದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡುವುದು.


ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.


ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.


ದೇವರ ಉಸಿರಿನಿಂದ ಅವರು ಕ್ಷಯಿಸಿ ಹೋಗುತ್ತಾರೆ. ದೇವರ ದಂಡನೆಯಿಂದ ಅಂಥವರು ನಾಶವಾಗುತ್ತಾರೆ;


ಅವನು ಹೂವಿನ ಹಾಗೆ ಅರಳಿ ಬಾಡುವನು; ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ.


ನೀವು ಜನರನ್ನು ಮರಣ ನಿದ್ರೆಯ ಪ್ರವಾಹದಂತೆ ಹೋಗಲು ಅನುಮತಿಸುತ್ತೀರಿ. ಅವರು ಬೆಳಿಗ್ಗೆ ಬೆಳೆಯುವ ಹುಲ್ಲಿನ ಹಾಗೆ ಇದ್ದಾರೆ.


ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಒಣಗಿ ಬಿದ್ದು ಹೋಗುತ್ತದೆ.


ನನ್ನ ಹೃದಯವು ಬಾಡಿಹೋಗಿ ಹುಲ್ಲಿನ ಹಾಗೆ ಒಣಗಿಹೋಗಿದೆ; ನಾನು ಊಟಮಾಡುವುದಕ್ಕೆ ಸಹ ಮರೆತುಬಿಡುತ್ತೇನೆ.


ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ; ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ.


ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.


ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.


ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸವನ್ನು ಇವರ ಮೇಲೆ ಊದಿದಾಗಲೇ ಒಣಗಿ ಹೋಗುವರು. ಬಿರುಗಾಳಿಯು ಇವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವುದು.


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.


ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ, ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು