Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:10 - ಕನ್ನಡ ಸಮಕಾಲಿಕ ಅನುವಾದ

10 ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:10
63 ತಿಳಿವುಗಳ ಹೋಲಿಕೆ  

ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.


ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?


ನನ್ನ ಪ್ರಾಣವು ನಿಮ್ಮನ್ನು ಆತುಕೊಂಡಿದೆ. ನಿಮ್ಮ ಬಲಗೈ ನನಗೆ ಬೆಂಬಲವಾಗಿದೆ.


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ಯೆಹೋವ ದೇವರು ಬೀಳುವವರೆಲ್ಲರನ್ನು ಉದ್ಧಾರ ಮಾಡುತ್ತಾರೆ. ತಗ್ಗಿಸಿಕೊಳ್ಳುವವರೆಲ್ಲರನ್ನು ಎತ್ತುತ್ತಾರೆ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.


ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಅವನು ಎಡವಿದರೂ ಬಿದ್ದುಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ತಾವೇ ತಮ್ಮ ಕೈಯಿಂದ ಅವನನ್ನು ಎತ್ತಿಹಿಡಿಯುವರು.


ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.


ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.


ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.


ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ. ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು. ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.


ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.


ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.


ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ.


ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.


ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ.


ಯೆರೂಸಲೇಮೇ, ಯೆಹೋವ ದೇವರನ್ನು ಸ್ತುತಿಸು; ಚೀಯೋನೇ, ನಿಮ್ಮ ದೇವರನ್ನು ಸ್ತುತಿಸು.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು.


ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.


ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, ಅವರ ಬಲಗೈ ಮೋಸದ ಬಲಗೈ ಆಗಿದೆ.


ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.


ಅವರಿಗೆ, “ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದ ಹಾಗೆ ಈಗ ಇಲ್ಲದಿರುವುದನ್ನು ನಾನು ನೋಡಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಕಡೆಗೆ ಇದ್ದಾರೆ.


ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.


ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು. ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವುದು.


ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.


ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ.


ಆಗ ಯೆಹೋವ ದೇವರ ಸೇವಕನಾದ ಹಗ್ಗಾಯನು, ಯೆಹೋವ ದೇವರ ಜನರಿಗೆ, “ನಾನು ನಿಮ್ಮ ಸಂಗಡ ಇದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.


ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ಆದರೆ ಯೆಹೋವ ದೇವರು ಅವನಿಗೆ, “ನಾನು ನಿನ್ನ ಸಂಗಡ ಖಂಡಿತವಾಗಿ ಇರುವುದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ,” ಎಂದರು.


ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.


ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.


ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.


ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.


ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.


ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು, “ಭಯಪಡಬೇಡ,” ಎಂದು ಹೇಳಿದಿರಿ.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು