Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:11 - ಕನ್ನಡ ಸಮಕಾಲಿಕ ಅನುವಾದ

11 “ನಿನಗೆ ವಿರೋಧವಾಗಿ ಉರಿಗೊಂಡವರೆಲ್ಲರೂ ಅವಮಾನ ಹೊಂದಿ, ಆಶಾಭಂಗಪಡುವರು. ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಶಾಭಂಗಪಟ್ಟು ಅವಮಾನ ಹೊಂದುವರು ನಿನ್ನ ಮೇಲೆ ಕೋಪಗೊಂಡವರು ನಾಶವಾಗಿ ನಿರ್ಮೂಲವಾಗುವರು ನಿನ್ನ ಸಂಗಡ ವ್ಯಾಜ್ಯವಾಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನ ಹೊಂದುವರು; ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:11
25 ತಿಳಿವುಗಳ ಹೋಲಿಕೆ  

ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು.


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು, ನನಗೆ ಅಡ್ಡಬಿದ್ದು, ನನಗೆ ನೀನೂ, ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ, ‘ಹೊರಗೆ ಹೋಗಿರಿ,’ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು,” ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.


ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.


ನಿನ್ನ ಹಿಂಸಕರು ಸ್ವಮಾಂಸವನ್ನೇ ಭುಜಿಸುವಂತೆ ಅನುಮತಿಸುವೆನು. ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ಸ್ವರಕ್ತವನ್ನೇ ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬ್ಯರ ಶೂರನೂ ಎಂದು ನರಮಾನವರೆಲ್ಲರಿಗೂ ಗೊತ್ತಾಗುವುದು.”


ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”


ಹಸಿದ ಮನುಷ್ಯನು ಕನಸು ಕಂಡು ಇಗೋ, ಉಣ್ಣುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚೆತ್ತಾಗ ಪ್ರಾಣ ತುಂಬಿದ ಹಾಗೆಯೂ, ಬಾಯಾರಿದವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚರವಾದಾಗ ಬಲಹೀನನಾಗಿದ್ದು, ಪ್ರಾಣ ಆಶಿಸುವ ಹಾಗೆಯೇ ಚೀಯೋನ್ ಪರ್ವತಕ್ಕೆ ವಿರೋಧವಾಗಿ ಯುದ್ಧಮಾಡುವ ಎಲ್ಲಾ ಜನಾಂಗಗಳ ಸಮೂಹವಿರುವುದು.


ನೀವು ಶೂನ್ಯವೇ, ನಿಮ್ಮ ಕಾರ್ಯವು ವ್ಯರ್ಥವೇ. ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.


ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ. ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ, ವ್ಯರ್ಥವಾಗಿಯೂ ಇವೆ.


ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.


ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.


ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳು ರಾತ್ರಿಯ ದರ್ಶನದ ಕನಸಿನಂತೆ ಮಾಯವಾಗುವುವು.


ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು. ಆದರೆ ಅಲ್ಲಿ ಯಾರೂ ಇರುವುದಿಲ್ಲ. ಅವಳ ಪ್ರಭುಗಳು ಇಲ್ಲದಂತಾಗುವರು.


ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.


ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ, ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ದಾಳಿಮಾಡುತ್ತಾರೋ, ಅವರು ನಿನಗೆ ಅಧೀನವಾಗುವರು.


ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು.


ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.


ಆದರೆ ಅವರು ಕೇಳದೆ ಹೋದರೆ, ಆ ಜನಾಂಗವನ್ನು ಸಂಪೂರ್ಣವಾಗಿ ಕಿತ್ತು ನಾಶಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು