Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:16 - ಕನ್ನಡ ಸಮಕಾಲಿಕ ಅನುವಾದ

16 ನೀನು ಅವುಗಳನ್ನು ತೂರಲು, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವ ದೇವರಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧರಲ್ಲಿ ಮಹಿಮೆ ಹೊಂದುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವದು; ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತು ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾವಿುಯಲ್ಲಿ ಹೆಚ್ಚಳಪಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:16
31 ತಿಳಿವುಗಳ ಹೋಲಿಕೆ  

ವಿದೇಶಿಯರನ್ನು ಬಾಬಿಲೋನಿಗೆ ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದು ಮಾಡುವರು; ಏಕೆಂದರೆ ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.


ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು. ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು.


ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ನನ್ನ ಜನರನ್ನು ನಾಶಮಾಡಿ ಅವರಿಗೆ ಶೋಕವನ್ನು ನೀಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು, ಹಿಂದಿರುಗದೆ ಇದ್ದುದರಿಂದ


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಆದರೆ ದುಷ್ಟರು ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೇ ಇದ್ದಾರೆ.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.


ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸವನ್ನು ಇವರ ಮೇಲೆ ಊದಿದಾಗಲೇ ಒಣಗಿ ಹೋಗುವರು. ಬಿರುಗಾಳಿಯು ಇವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವುದು.


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.


ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ, ಎಂದೆಂದಿಗೂ ಉಲ್ಲಾಸಪಡಿರಿ. ಏಕೆಂದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸವನ್ನೂ, ನನ್ನ ಜನರಲ್ಲಿ ಸಂತೋಷವನ್ನೂ ಸೃಷ್ಟಿಸುತ್ತೇನೆ.


“ನೀನು ನನ್ನ ಗದೆಯೂ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರುಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ.


ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: “ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.”


ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.


ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ.


ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು