Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಯೆಹೋವ ದೇವರ ಹಸ್ತವು ಇದನ್ನು ಮಾಡಿದೆ ಎಂದೂ, ಇಸ್ರಾಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ಕಂಡು ತಿಳಿದು, ಮನಸ್ಸಿಗೆ ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲ ಸ್ವಾವಿುಯೇ ಸೃಷ್ಟಿಸಿದ್ದಾನೆ ಎಂದು ಎಲ್ಲರೂ ಕಂಡು ತಿಳಿದು ಮನಮುಟ್ಟಿ ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:20
20 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಕೈ ಇವುಗಳನ್ನೆಲ್ಲಾ ಮಾಡಿತೆಂದು ಇವುಗಳಲ್ಲಿ ತಿಳಿಯದಿರುವುದು ಯಾವುದು?


ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.


ಇದು ನಿಮ್ಮ ಕೈ ಕೆಲಸ ಎಂದು ಅವರಿಗೆ ಗೊತ್ತಾಗಲಿ, ಇದು ನಿನ್ನಿಂದಲೇ ಆಯಿತೆಂದು ಅವರು ತಿಳಿದುಕೊಳ್ಳಲಿ.


“ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗೊಣಗುಟ್ಟುವವರು ಬೋಧನೆ ಕಲಿಯುವರು.”


ಆಗ ಯೆಹೋವ ದೇವರ ಮಹಿಮೆಯು ಗೋಚರವಾಗುವುದು. ಮಾನವರೆಲ್ಲರೂ ಒಟ್ಟಿಗೆ ಅದನ್ನು ಕಾಣುವರು. ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.”


ಯೆಹೋವನಾದ ನಾನು ನಿಮ್ಮ ಪರಿಶುದ್ಧನೂ, ಇಸ್ರಾಯೇಲನ್ನು ಸೃಷ್ಟಿಸಿದವನೂ, ನಿಮ್ಮ ಅರಸನೂ ಆಗಿದ್ದೇನೆ.


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.


ಈ ವಿವೇಕವು ಸಹ ಅತಿಶಯ ಆಲೋಚನಾಪರರೂ, ಕಾರ್ಯಸಾಧಕ ಜ್ಞಾನ ಶ್ರೇಷ್ಠರೂ ಆಗಿರುವ ಸೇನಾಧೀಶ್ವರ ಯೆಹೋವ ದೇವರಿಂದಲೇ ಹೊರಡುತ್ತದೆ.


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು