Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:27 - ಕನ್ನಡ ಸಮಕಾಲಿಕ ಅನುವಾದ

27 ನಾನು ಮೊದಲನೆಯವನಾಗಿ ಚೀಯೋನಿಗೆ, ‘ಇಗೋ, ಅವರನ್ನು ನೋಡು’ ಎಂದು ಹೇಳಿ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇಗೋ ನೋಡು ಎನ್ನುವ ಮುಂದೂತನನ್ನು ಚೀಯೋನಿಗೆ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇವಿುಗೆ, ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:27
14 ತಿಳಿವುಗಳ ಹೋಲಿಕೆ  

ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.


ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.


ಪೂರ್ವಕಾಲದಲ್ಲೇ ಹಳೆಯ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತಿಳಿಸಿದ್ದೇನೆ. ನಾನು ತಟ್ಟನೆ ನಡೆಸಲು, ಅವು ನೆರವೇರಿದವು.


ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.


“ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ಆತನು ನಾನೇ, ನಾನೇ ಮೊದಲನೆಯವನು, ನಾನೇ ಕಡೆಯವನು.


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.


ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು