Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:1 - ಕನ್ನಡ ಸಮಕಾಲಿಕ ಅನುವಾದ

1 ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:1
49 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು. ಏಕೆಂದರೆ ಅವರನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ. ನಾನು ಅವರನ್ನು ನಿರ್ಮಿಸಿದ್ದೇನೆ. ಹೌದು, ನಾನು ಅವರನ್ನು ಉಂಟುಮಾಡಿದ್ದೇನೆ.”


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


“ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಸೆರೆಯವರನ್ನು ಸೆರೆಯಿಂದಲೂ, ಕತ್ತಲೆಯಲ್ಲಿ ವಾಸಿಸುವವರನ್ನು ಕಾರಾಗೃಹದಿಂದಲೂ ಹೊರತರಬೇಕು,” ಎಂದು ಯೆಹೋವ ದೇವರಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ, ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಇತರ ಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.


ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು.


ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.


“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.


ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಇದು ಮುಂದಿನ ಸಂತತಿಗೋಸ್ಕರ ಲಿಖಿತವಾಗಿರಲಿ; ಹುಟ್ಟಲಿಕ್ಕಿರುವ ಜನರು ಯೆಹೋವ ದೇವರನ್ನು ಸ್ತುತಿಸಲಿ.


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರ ಮಾತಿದು, “ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದ ನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ.


ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”


ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.


ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ


ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ, ನಕ್ಷತ್ರಗಳನ್ನಾಗಲಿ ಕಾಣದೆ ಚಂಡಮಾರುತ ಬೀಸುತ್ತಲೇ ಇದ್ದುದರಿಂದ ನಾವು ತಪ್ಪಿಸಿಕೊಳ್ಳುವ ಎಲ್ಲಾ ನಿರೀಕ್ಷೆಯನ್ನು ಕಳೆದುಕೊಂಡೆವು.


ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ. ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು. ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.


ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.


ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


“ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?


ನಿನ್ನ ಹಿಂಸಕರು ಸ್ವಮಾಂಸವನ್ನೇ ಭುಜಿಸುವಂತೆ ಅನುಮತಿಸುವೆನು. ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ಸ್ವರಕ್ತವನ್ನೇ ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬ್ಯರ ಶೂರನೂ ಎಂದು ನರಮಾನವರೆಲ್ಲರಿಗೂ ಗೊತ್ತಾಗುವುದು.”


ಆಕಾಶವನ್ನು ಹಾಸಿ, ಭೂಮಿಯ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟುಮಾಡಿದ ಯೆಹೋವ ದೇವರನ್ನು ನೀನು ಮರೆತುಬಿಟ್ಟು, ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶಪಡಿಸುವನೋ ಎಂಬಂತೆ ಅಂಜಿಕೊಂಡಿದ್ದೀಯಲ್ಲಾ, ಆ ಹಿಂಸಕನ ಕೋಪವು ಎಲ್ಲಿ?


ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು, “ಭಯಪಡಬೇಡ,” ಎಂದು ಹೇಳಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು