Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:20 - ಕನ್ನಡ ಸಮಕಾಲಿಕ ಅನುವಾದ

20 ಕಾಡುಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆಯ್ದುಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕಾಡುಮೃಗಗಳು, ನರಿ, ಉಷ್ಟ್ರಪಕ್ಷಿಗಳು ಕೂಗಿ ಕೊಂಡಾಡುವುವು ನನ್ನನು. ಏಕೆನೆ ಕೊಡುವೆನು ನೀರನ್ನು ಮರುಭೂಮಿಯಲಿ ಹರಿಸುವೆನು ತೊರೆನದಿಗಳನ್ನು ಅರಣ್ಯದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಸ್ತೋತ್ರವನ್ನು ಪ್ರಚಾರಪಡಿಸಲಿ ಎಂದು ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ವನ್ಯಜೀವಿಗಳೂ ನನಗೆ ಕೃತಜ್ಞತೆಯಿಂದ ಇರುತ್ತವೆ. ದೊಡ್ಡ ಗಾತ್ರದ ಪ್ರಾಣಿಗಳೂ ಪಕ್ಷಿಗಳೂ ನನ್ನನ್ನು ಗೌರವಿಸುವವು. ನಾನು ಮರುಭೂಮಿಯಲ್ಲಿ ನೀರನ್ನು ಬರಮಾಡುವಾಗ ಅವು ನನ್ನನ್ನು ಗೌರವಿಸುವವು. ನಾನು ಆರಿಸಿಕೊಂಡ ನನ್ನ ಜನರಿಗೆ ನೀರನ್ನು ಕೊಡುವುದಕ್ಕಾಗಿ ನಾನು ಇದನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:20
27 ತಿಳಿವುಗಳ ಹೋಲಿಕೆ  

ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ, ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ, ಯೆಹೋವನಾದ ನಾನೇ ಅವರಿಗೆ ಉತ್ತರಕೊಡುವೆನು. ಇಸ್ರಾಯೇಲ್ ದೇವರಾಗಿರುವ ನಾನು ಅವರನ್ನು ಕೈಬಿಡೆನು.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. ಬಾಬಿಲೋನಿಗೆ ಕಾಲವು ಸಮೀಪಿಸಿತು. ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


“ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.


ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು. ಅದು ಈಗಲೇ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸುವೆನು. ಮರುಭೂಮಿಯಲ್ಲಿ ನದಿಗಳನ್ನೂ ಉಂಟುಮಾಡುವೆನು.


ಕಾಡುಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ, ಹಾರುವ ಪಕ್ಷಿಗಳೇ,


ಸಿಂಹದ ಮರಿಗಳು ಬೇಟೆಗೋಸ್ಕರವೂ, ದೇವರಿಂದ ತಮ್ಮ ಆಹಾರವನ್ನು ಹುಡುಕುವುದಕ್ಕೋಸ್ಕರವೂ ಗರ್ಜಿಸುತ್ತವೆ.


ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.


ಅವರ ಸೇವಕನಾದ ಇಸ್ರಾಯೇಲಿನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,


ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.


ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.


ಅಲ್ಲಿ ಯೆಹೋವ ದೇವರು ನಮ್ಮ ಬಲಶಾಲಿಯಾಗಿರುತ್ತಾರೆ. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟುವುದಿಲ್ಲ.


ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.


ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು ತಗ್ಗುಗಳ ಮಧ್ಯದಲ್ಲಿ ಬುಗ್ಗೆಗಳನ್ನು ಹೊರಡಿಸಿ, ಮರುಭೂಮಿಯನ್ನು ನೀರಿನ ಕೆರೆಯನ್ನಾಗಿಯೂ, ಒಣನೆಲವನ್ನು ನೀರಿನ ಒರತೆಗಳನ್ನಾಗಿಯೂ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು