Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:21 - ಕನ್ನಡ ಸಮಕಾಲಿಕ ಅನುವಾದ

21 ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ನಿರ್ಮಿಸಿದ ಈ ಜನರು ನನಗೆ ಸ್ತೋತ್ರಗಾನ ಹಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:21
22 ತಿಳಿವುಗಳ ಹೋಲಿಕೆ  

ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.


ಇದು ಮುಂದಿನ ಸಂತತಿಗೋಸ್ಕರ ಲಿಖಿತವಾಗಿರಲಿ; ಹುಟ್ಟಲಿಕ್ಕಿರುವ ಜನರು ಯೆಹೋವ ದೇವರನ್ನು ಸ್ತುತಿಸಲಿ.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.


ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು. ಆದಕಾರಣ ನಾನು ಅವಮಾನ ಪಡುವುದಿಲ್ಲ. ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ. ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಯೆಹೋವ ದೇವರು ತಮ್ಮ ನಂಬಿಗಸ್ತರನ್ನು ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು.


ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.


ಆಗ ನಿಮ್ಮ ಜನರೂ, ನಿಮ್ಮ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿಮ್ಮನ್ನು ಕೊಂಡಾಡಿ, ತಲತಲಾಂತರಕ್ಕೂ ನಿಮ್ಮ ಸ್ತೋತ್ರವನ್ನು ಸಾರುವೆವು.


ಅವರು ಯೆಹೋವ ದೇವರಿಗೆ ಮಹಿಮೆಯನ್ನು ಸಲ್ಲಿಸಲಿ! ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.


ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ಯಾವ ಪ್ರಕಾರ ಇದು ಮನುಷ್ಯನ ನಡುವಿಗೆ ಹತ್ತಿಕೊಳ್ಳುವುದೋ, ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ, ಯೆಹೂದದ ಮನೆತನವನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು, ಆದರೆ ಅವರು ಕೇಳದೇ ಹೋದರು ಎಂದು ಯೆಹೋವ ದೇವರ ಅನ್ನುತ್ತಾರೆ.’


“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಉನ್ನತವಾದ ಪವಿತ್ರ ಸ್ಥಾನದಿಂದ ಕೆಳಕ್ಕೆ ನೋಡಿದ್ದಾರೆ; ಅವರು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾರೆ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು