Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:22 - ಕನ್ನಡ ಸಮಕಾಲಿಕ ಅನುವಾದ

22 “ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ. ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಯಕೋಬೇ, ನೀನೆನ್ನ ನಾಮಸ್ಮರಣೆ ಮಾಡದೆಹೋದೆ; ಇಸ್ರಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಯಾಕೋಬೇ, ನೀನು ನನಗೆ ಪ್ರಾರ್ಥಿಸಲಿಲ್ಲ. ಇಸ್ರೇಲೇ, ನೀನು ನನ್ನ ವಿಷಯದಲ್ಲಿ ಆಯಾಸಗೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:22
19 ತಿಳಿವುಗಳ ಹೋಲಿಕೆ  

ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ? ನಾನು ನಿಮ್ಮ ಮೇಲೆ ಭಾರ ಹಾಕಿದ್ದೇನೋ? ನನಗೆ ಉತ್ತರಕೊಡಿರಿ.


“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,


ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.


ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?


ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ನಿಮ್ಮನ್ನು ಸ್ವೀಕರಿಸದ ಜನಾಂಗಗಳ ಮೇಲೆಯೂ, ನಿಮ್ಮ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿಮ್ಮ ಕೋಪವನ್ನು ಸುರಿಸಿಬಿಡಿರಿ.


ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ.


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು