Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:13 - ಕನ್ನಡ ಸಮಕಾಲಿಕ ಅನುವಾದ

13 ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ, ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಡಗಿಯು ಮರಕ್ಕೆ ನೂಲು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ; ಕೈವಾರದಿಂದ ಗುರುತಿಸುತ್ತಾನೆ, ಉಳಿ ಬಾಚಿಗಳಿಂದ ಕೆತ್ತುತ್ತಾನೆ; ಸುಂದರವಾದ ನರನಂತೆ ರೂಪಿಸಿ ಮಂದಿರದಲ್ಲಿ ಇಡಲು ಯೋಗ್ಯವಾಗುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಡಗಿಯು [ಮರಕ್ಕೆ] ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಉಳಿಬಾಚಿಗಳಿಂದ ಕೆತ್ತಿ ಕೈವಾರದಿಂದ ಗುರುತಿಸಿ ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ನರನ ಅಂದದಂತೆ ರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡುಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:13
18 ತಿಳಿವುಗಳ ಹೋಲಿಕೆ  

ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು.


“ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.


ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ಹಾಗೆಯೇ ಶಿಲ್ಪಿಯು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು. ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ತಟ್ಟುವವನನ್ನು ಉತ್ತೇಜಿಸಿದನು. ಬೆಸುಗೆ “ಚೆನ್ನಾಗಿದೆ” ಎಂದು ಹೇಳಿ, ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.


ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.”


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.


ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.


ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳು ಸಿಕ್ಕುವುವೋ ಅವರು ಸಾಯಲಿ. ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ, ನಮ್ಮ ಬಂಧುಗಳ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ,” ಎಂದನು. ಆದರೆ ರಾಹೇಲಳು ಅವುಗಳನ್ನು ಕದ್ದುಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.


ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಹಾರೈಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದನು.


ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


ಅರಣ್ಯದ ಮಧ್ಯದಲ್ಲಿ ಇರುವ ಮರಗಳಲ್ಲಿ ದೇವದಾರುಗಳನ್ನು ಕಡಿದು, ತುರಾಯಿ, ಸೈಪ್ರಸ್ ಮತ್ತು ಏಲಾ ಮರಗಳನ್ನು ತನ್ನ ಕೆಲಸಕ್ಕೋಸ್ಕರ ತೆಗೆದುಕೊಳ್ಳುತ್ತಾನೆ. ಪೀತದಾರ ಮರವನ್ನು ಅವನು ನೆಡಲು, ಮಳೆಯು ಅದನ್ನು ಬೆಳೆಯಿಸುವುದು.


ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ, ಇಸ್ರಾಯೇಲರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.


ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು